ಆ್ಯಪ್ನಗರ

ಖರ್ಗೆ ಅಕ್ರಮ ಆಸ್ತಿ: ಲೋಕ್‌ಪಾಲ್‌ಗೆ ದೂರು- ಗುತ್ತೇದಾರ್‌

ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ 50 ಸಾವಿರ ಕೋಟಿ ರೂ. ಅಕ್ರಮ ಹಣ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ಲೋಕಪಾಲ್‌ಗೆ ದೂರು ನೀಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಮಾಜಿ ಶಾಸಕ, ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ್‌ ತಿಳಿಸಿದರು.

Vijaya Karnataka 13 May 2019, 5:00 am
ಕಲಬುರಗಿ:ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ 50 ಸಾವಿರ ಕೋಟಿ ರೂ. ಅಕ್ರಮ ಹಣ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ಲೋಕಪಾಲ್‌ಗೆ ದೂರು ನೀಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಮಾಜಿ ಶಾಸಕ, ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ್‌ ತಿಳಿಸಿದರು.
Vijaya Karnataka Web kharges illegal property complaint to lokpal gautader
ಖರ್ಗೆ ಅಕ್ರಮ ಆಸ್ತಿ: ಲೋಕ್‌ಪಾಲ್‌ಗೆ ದೂರು- ಗುತ್ತೇದಾರ್‌


ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಅಕ್ರಮ ಆಸ್ತಿ ಗಳಿಸಿದ್ದು ಸತ್ಯ. ಈ ಆರೋಪಕ್ಕೆ ಈಗಲೂ ಬದ್ಧ. ಲೋಕಾಯುಕ್ತದಲ್ಲಿ ಈ ಪ್ರಕರಣ ವಿಚಾರಣೆಯಲ್ಲಿದೆ. ಚುನಾವಣೆ ಬಳಿಕ ಖರ್ಗೆ ವಿರುದ್ಧ ದೂರು ಕೊಡಲು ಬಹಳಷ್ಟು ಜನ ತಯಾರಾಗಿದ್ದಾರೆ ಎಂದರು.

ಸಿಎಂ ಕುಮಾರಸ್ವಾಮಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಕುಡಿವ ನೀರಿನ ಹಾಹಾಕಾರ ಎದ್ದಿದ್ದು, ಅಧಿಕಾರಿಗಳ ಸಭೆ ಕರೆದೂ ಸೂಕ್ತ ನಿರ್ದೇಶನ ನೀಡುವ ಬದಲು ರೆಸಾರ್ಟ್‌ಗೆ ಹೋಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಮ್ಮಿಶ್ರ ಸರಕಾರದ ಬಗ್ಗೆ ಜನರಿಗೆ ಆಕ್ರೋಶವಿದೆ. ಈ ಸರಕಾರದಲ್ಲಿ ಯಾವುದೇ ಕೆಲಸ ಆಗುತ್ತಿಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ