ಆ್ಯಪ್ನಗರ

ರಾಜ್ಯದಲ್ಲಿ ರಾಜಕೀಯ ದ್ವೇಷ ಉಕ್ಕಿ ಹರಿಯುತ್ತಿದೆ! ಸಿಬಿಐ ತನಿಖೆಗೆ ಉತ್ತರ ಕೊಡುತ್ತೇನೆ ಎಂದ ಡಿಕೆಶಿ

ರಾಜ್ಯದಲ್ಲಿ ರಾಜಕೀಯದ ದ್ವೇಷ ಉಕ್ಕಿ ಹರಿಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಆರೋಪಿಸಿದ್ದಾರೆ. ಕಲಬುರಗಿಯಲ್ಲಿ ಮಂಗಳವಾರ ಮಾತನಾಡಿದ ಅವರು ಈ ಕುರಿತಾಗಿ ಏನು ಹೇಳಿದ್ದಾರೆ ಎಂಬ ವಿವರ ಇಲ್ಲಿದೆ.

Vijaya Karnataka Web 24 Nov 2020, 10:43 am
ಕಲಬುರಗಿ: ರಾಜ್ಯದಲ್ಲಿ ರಾಜಕೀಯ ದ್ವೇಷ ಉಕ್ಕಿ ಹರಿಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಿಬಿಐ ನೋಟಿಸ್‌ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿಬಿಐ ಕಚೇರಿಗೆ ತೆರಳಿ ಅವರು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಿದ್ದ ಎಂದರು.
Vijaya Karnataka Web dk shivakumar


ನಾನೊಬ್ಬ ಸಾಮಾನ್ಯ ನಾಗರೀಕ ದೇಶದ ಕಾನೂನಿಗೆ ಗೌರವ ಕೊಡುವುದು ನನ್ನ ಕರ್ತವ್ಯ. ನಿಮಗೆ ಯಾವುದೇ ರೀತಿಯ ಅವಮಾನ ಆಗುವ ರೀತಿಯಲ್ಲಿ ನಾನು ನಡೆದುಕೊಂಡಿಲ್ಲ. ಕಾನೂನಿನ ಚೌಕಟ್ಟಿನಲ್ಲಿದ್ದೇನೆ ಎಂದರು.

ಸಂಪುಟ ವಿಸ್ತರಣೆ ವಿಳಂಬ: ಕುತೂಹಲ ಕೆರಳಿಸಿದ ರಮೇಶ್ ಜಾರಕಿಹೊಳಿ ಬಿಎಸ್‌ವೈ ಭೇಟಿ

ತನಿಖೆಗಾಗಿ ಸಿಬಿಐ ಕಚೇರಿಗೆ ಹೋದಂತಹ ಸಂದರ್ಭದಲ್ಲಿಅಭಿಮಾನಿಗಳು, ಕಾರ್ಯಕರ್ತರು ಸಿಬಿಐ ಕಚೇರಿಗೆ ಬರಬಾರದು ಎಂದು ಮನವಿ ಮಾಡಿದ ಡಿಕೆಶಿ ಯಾರೂ ಗಾಬರಿ ಪಡಬೇಕಾದ ಅಗತ್ಯ ಇಲ್ಲ, ಸಿಬಿಐ ತನಿಖೆಗೆ ಸಂಪೂರ್ಣ ಸಹಕಾರ ಕೊಡುತ್ತೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ರಾಜಕೀಯದ ದ್ವೇಷ ಉಕ್ಕಿ ಹರಿಯುತ್ತಿದೆ ಆದರೆ ಅದಕ್ಕೆ ಉತ್ತರ ಕೊಡುತ್ತೇನೆ. ರಾಜ್ಯದಲ್ಲಿ ಯಾವ ಶಾಸಕರ ಮೇಲೂ ಸಿಬಿಐ ತನಿಖೆಗೆ ಅವಕಾಶ ಕೊಟ್ಟಿಲ್ಲ. ಆದರೆ ಇದನ್ನು ವಿಶೇಷವಾಗಿ ಕೊಟ್ಟಿದ್ದಾರೆ. ಇದರಿಂದ ಜಯಿಸಿಕೊಂಡು ಹೊರಗೆ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಸ್ಕಿ, ಬಸವಕಲ್ಯಾಣ ಬೈಎಲೆಕ್ಷನ್: ಬಿಜೆಪಿಗೆ ಪ್ರತಿಷ್ಠೆ, ಕಾಂಗ್ರೆಸ್‌ಗೆ ಅನಿವಾರ್ಯತೆ!

ಮಸ್ಕಿಯಲ್ಲಿ ಉತ್ತಮ ಜನ ಬೆಂಬಲ

ಮಸ್ಕಿಯಲ್ಲಿ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದ್ದು, ಬಸನಗೌಡ ತುರ್ವಿಹಾಳ ಪರವಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಿದ ಶೇಖಡಾ 99 ರಷ್ಟು ಜನ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ನನ್ನ ರಾಜಕೀಯ ಅನುಭವದಲ್ಲಿ ಇದೊಂದು ದೊಡ್ಡ ಸೇರ್ಪಡೆ ಸಭೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ