Kalaburagi: ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ: ಮಾಲೀಕಯ್ಯ ಗುತ್ತೇದಾರ್

Vijaya Karnataka Web 23 Mar 2023, 7:12 pm
ಕಲಬುರಗಿ: ಬಾಬುರಾವ್ ಚಿಂಚನಸೂರ್‌ ಬಿಜೆಪಿ ತೊರೆದ ರೀತಿ ಸರಿಯಿಲ್ಲ. ಇದರಿಂದಾಗಿ ಚಿಂಚನಸೂರ್‌ ರಾಜಕೀಯ ಭವಿಷ್ಯ ಪತನವಾದಂತೆ. ನಾನು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆ ಆಗುವುದಾಗಿ ಕೆಲವರು ವದಂತಿ ಹಬ್ಬಿಸಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಆಗುವುದಾಗಿ ಉದ್ದೇಶಪೂರ್ವಕವಾಗಿಯೇ ಹೀಗೆ ಕೆಲವರು ವದಂತಿ ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಆಗುವಂತಹ ಪರಿಸ್ಥಿತಿ ನನಗೆ ಬಂದಿಲ್ಲ ಎಂದು ಮಾಲೀಕಯ್ಯ ಗುತ್ತೇದಾರ್ ಹೇಳಿದ್ದಾರೆ.

ಅಫಜಲಪುರ ಕ್ಷೇತ್ರದಲ್ಲಿ ಬಿಜೆಪಿ ಅತ್ಯಂತ ಬಲಿಷ್ಠವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಸದೃಢ ಸ್ಥಿತಿಯಲ್ಲಿದೆ. ಹಾಗಾಗಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರು ಜಿಲ್ಲೆಯಲ್ಲಿ ಕಮಲ ಅರಳಿಸುವುದೇ ನಮ್ಮ ಗುರಿ ಎಂದರು. ಕೊನೆಯುಸಿರು ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ ವದಂತಿಗಳಿಗೆ ಕಿವಿಗೊಡಬೇಡಿ ಎಂದರು.

ದೇಶದಲ್ಲಿ ಭ್ರಷ್ಟಾಚಾರ ಹುಟ್ಟಿದ್ದೇ ಕಾಂಗ್ರೆಸ್ ಅವಧಿಯಲ್ಲಿ ಎಂಬುದನ್ನು ಮರೆಮಾಚಲು ಬಿಜೆಪಿ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಹಾಗೆ ನೋಡಿದರೆ ಅರ್ಕಾವತಿ ಬಡಾವಣೆಯ ಹಗರಣದ ಸೂಕ್ತ ತನಿಖೆಯಾದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೈಲು ಪಾಲಾಗುತ್ತಾರೆ ಎಂದು ಹೇಳಿದರು.
Loading ...