ಆ್ಯಪ್ನಗರ

ಪಶು ಆಸ್ಪತ್ರೆಗೆ ದಿಢೀರ್ ಭೇಟಿ: ಕರ್ತವ್ಯಕ್ಕೆ ಗೈರಾಗಿದ್ದ ಸಿಬ್ಬಂದಿ ಅಮಾನತು ಮಾಡಿದ ಸಚಿವ ಪ್ರಭು ಚವ್ಹಾಣ್

ಅನಗತ್ಯವಾಗಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಸಿಬ್ಬಂದಿಯನ್ನು ಅಮಾನತುಗೊಳಿಸಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಆದೇಶ ಹೊರಡಿಸಿದ್ದಾರೆ.

Vijaya Karnataka Web 19 Sep 2019, 2:26 pm
ಕಲಬುರಗಿ: ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಇಲಾಖೆಯ ಜಿಲ್ಲಾ ಕಚೇರಿಗೆ ದಿಢೀರ್ ಭೇಟಿ ನೀಡಿದ್ದು, ಅನಗತ್ಯ ಗೈರು ಹಾಜರಾದ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
Vijaya Karnataka Web prabhu


ಜಿಲ್ಲಾ ಪ್ರವಾಸದಲ್ಲಿದ್ದ ಪಶು ಸಂಗೋಪನಾ ಸಚಿವರು ಅನಿರೀಕ್ಷಿತವಾಗಿ ಜಿಲ್ಲಾ ಪಶು ಆಸ್ಪತ್ರೆಗೆ ಭೇಟಿ ನೀಡಿದ್ದು, ಆಸ್ಪತ್ರೆಯಲ್ಲಿನ ಆಡಳಿತಾತ್ಮಕ ದುರಾವಸ್ಥೆ ಸೇರಿದಂತೆ ನಿರ್ಮಲ್ಯ ಕಾಪಾಡದಿರುವುದಕ್ಕೆ ಉಪ ನಿರ್ದೇಶಕ ಹನುಮಂತಪ್ಪ ಅವರ ಮೇಲೆ ಸಿಡಿಮಿಡಿಗೊಂಡರು.

ಆಸ್ಪತ್ರೆಯಲ್ಲಿ ತುಕ್ಕು ಹಿಡಿಯುತ್ತಿರುವ ಎಕ್ಸ್ ರೇ ಮಶಿನ್‌ಗಳು ಮತ್ತು ಪೀಠೋಪಕರಣ ನಿರ್ವಹಣೆ ಮಾಡುವಲ್ಲಿ ವಿಫಲರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಖಡಕ್ ಸೂಚನೆ ನೀಡಿದರು.

ಇದೇ ವೇಳೆ ಸತತ ಎರಡೂವರೆ ತಿಂಗಳಿಂದ ಕಚೇರಿಗೆ ಚಕ್ಕರ ಹೊಡೆಯುತ್ತಿದ್ದ ಡಿ ಗ್ರೂಪ್ ನೌಕರ್ ಉಪೇಂದ್ರ ಎಂಬವರನ್ನು ಅಮಾನತುಗೊಳಿಸಿ ಆದೇಶ ಪ್ರತಿ ನೀಡುವಂತೆ ಹೇಳಿದರು.

ಬಳಿಕ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದ ಸಚಿವರು, ಕಚೇರಿಯ ದುರಾವಸ್ಥೆಯ ಬಗ್ಗೆ ಸಂಪೂರ್ಣ ವಿವರಣೆ ನೀಡಿ ಕೂಡಲೇ ಸರಿಪಡಿಸುವಂತೆ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ