ಕಲಬುರಗಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಸೇರಿದಂತೆ ಎಲ್ಲಾ ರೈತರಿಗೆ ಕೃಷಿ ಇಲಾಖೆಯು ರೈತ ಸಂಪರ್ಕ ಕೇಂದ್ರದ ಮೂಲಕ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ ವಿತರಿಸುತ್ತಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಆರ್. ವೆಂಕಟೇಶ್ ಕುಮಾರ್ ಅವರು ಕರೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟುಗಳ ಉಪ ಯೋಜನೆಯಡಿ ಕಾರ್ಯಕ್ರಮ ಅನುಷ್ಠಾನದ ಕುರಿತ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡುತ್ತಿದ್ದರು.
ತೊಗರಿ, ಉದ್ದು, ಹೆಸರು, ಸೋಯಾಬೀನ್ ಬಿತ್ತನೆ ಬೀಜಗಳನ್ನು ಪ್ರತಿ ಕಿಲೋ ಗ್ರಾಂ.ಗೆ ಎಸ್ಸಿ-ಎಸ್ಟಿ ಜನಾಂಗದ ರೈತರಿಗೆ 37.50 ರೂಪಾಯಿ ಸಬ್ಸಿಡಿ ಹಾಗೂ ಇತರೆ ರೈತರಿಗೆ 25 ರೂಪಾಯಿ ಸಬ್ಸಿಡಿ ದರದಲ್ಲಿ ವಿತರಿಸಲಾಗುತ್ತದೆ ಎಂದರು.
ಭತ್ತದ ಬಿತ್ತನೆ ಬೀಜವನ್ನು ಎಸ್ಸಿ-ಎಸ್ಟಿ ಜನಾಂಗದ ರೈತರಿಗೆ 12 ರೂಪಾಯಿ ಸಬ್ಸಿಡಿ ಹಾಗೂ ಇತರೆ ರೈತರಿಗೆ 8 ರೂಪಾಯಿ ಸಬ್ಸಿಡಿ ದರದಲ್ಲಿ ನೀಡಲಾಗುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜ ಎಸ್ಸಿ-ಎಸ್ಟಿ ಜನಾಂಗದ ರೈತರಿಗೆ 120 ರೂಪಾಯಿ ಸಬ್ಸಿಡಿ ಹಾಗೂ ಇತರೆ ರೈತರಿಗೆ 80 ರೂಪಾಯಿ ಸಬ್ಸಿಡಿ ದರದಲ್ಲಿ ದೊರೆಯಲಿವೆ. ಹಾಗೆಯೇ ಸಜ್ಜೆ, ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನೂ ಸಬ್ಸಿಡಿ ದರದಲ್ಲಿ ವಿತರಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಬಿತ್ತನೆ ಬೀಜ ವಿತರಣೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ರತೇಂದ್ರನಾಥ ಸೂಗೂರು ಮಾತನಾಡಿ, 2019-20ನೇ ಸಾಲಿನಲ್ಲಿ ಎಸ್ಸಿಪಿ ಯೋಜನೆಯಡಿಯಲ್ಲಿ ಮುಂಗಾರು ಬಿತ್ತನೆ ಬೀಜಕ್ಕಾಗಿ ರಾಜ್ಯ ವಲಯದ ಅನುದಾನದಲ್ಲಿ 2 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈಗಾಗಲೇ 1.07 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಈ ಪೈಕಿ 1.01 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ವಾರ್ಷಿಕ 20651 ಫಲಾನುಭವಿಗಳ ಗುರಿ ಹೊಂದಲಾಗಿದ್ದು, ಇದುವರೆಗೆ 16004 ಫಲಾನುಭವಿ ರೈತರಿಗೆ 14 ಸಾವಿರ ಕ್ವಿಂಟಲ್ ಬಿತ್ತನೆ ಬೀಜ ವಿತರಿಸಲಾಗಿದೆ. ಇದುವರೆಗೆ ಶೇಕಡ 77.50ರಷ್ಟು ಸಾಧನೆ ಮಾಡಲಾಗಿದೆ ಎಂದು ಅಂಕಿ-ಅಂಶ ಸಹಿತ ಅವರು ವಿವರಿಸಿದರು.
ಜಿಪಂ ಸಿಇಒ ಡಾ. ಪಿ ರಾಜಾ ಮಾತನಾಡಿ, ತೋಟಗಾರಿಕಾ ಇಲಾಖೆಯ ಎಸ್ಸಿಪಿ-ಟಿಎಸ್ಪಿ ವಿಶೇಷ ಘಟಕ ಯೋಜನೆಗಳ ಪ್ರಗತಿ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಜಿಲ್ಲೆಯ ರೈತರು ಬೆಳೆದ ಹೂವು ಮತ್ತಿತರ ತೋಟಗಾರಿಕಾ ಉತ್ಪನ್ನಗಳನ್ನು ಹೈದ್ರಾಬಾದ್ ಮತ್ತಿತರ ಮಾರುಕಟ್ಟೆಗೆ ಸಾಗಿಸಲು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಜೊತೆ ಚರ್ಚಿಸಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಎಸ್ಸಿಪಿ ವಿಶೇಷ ಘಟಕ ಯೋಜನೆಯಡಿ ಹೆಣ್ಣು ಮಕ್ಕಳ ಭಾಗ್ಯಲಕ್ಷ್ಮೇ ಬಾಂಡ್ ವಿತರಣೆಯ ಗುರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.ಮೂರು ತಿಂಗಳಲ್ಲಿ ಕೇವಲ 254 ಫಲಾನುಭವಿಗಳ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಶಿಶುಗಳ ಜನನ ಪ್ರಮಾಣಕ್ಕೆ ಹೋಲಿಸಿದರೆ ಫಲಾನುಭವಿಗಳ ಸಂಖ್ಯೆ ತೀರಾ ಕಡಿಮೆ ಎಂದರು.
ಸಭೆಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೆ.ಸತೀಶ್ ಅವರು, ಎಸ್ಸಿಪಿ-ಟಿಎಸ್ಪಿ ವಿಶೇಷ ಘಟಕ ಯೋಜನೆಗಳ ಅಡಿಯಲ್ಲಿ 2018-19 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇಕಡ 95.45ರಷ್ಟು ಗುರಿ ಸಾಧಿಸಲಾಗಿದೆ. ಇನ್ನು 2019-20ನೇ ಸಾಲಿನಲ್ಲಿ ಜೂನ್ ಅಂತ್ಯದವರೆಗೆ ಶೇ.15.31ರಷ್ಟು ಸಾಧನೆ ತೋರಲಾಗಿದೆ ಎಂದರು.
ಮೊಟ್ಟೆ ಸಮರ್ಪಕ ವಿತರಣೆಗೆ ಸೂಚನೆ
ಅನುದಾನ ನಿಗದಿತ ಸಮಯಕ್ಕೆ ಬಿಡುಗಡೆಯಾಗದಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ಅಪೌಷ್ಟಿಕತೆ ನಿವಾರಣೆಗೆ ಮೊಟ್ಟೆ ಸರಿಯಾಗಿ ವಿತರಿಸಲಾಗುತ್ತಿಲ್ಲ ಎಂಬ ದೂರು ಇದೆ ಹಾಗೂ ಮಕ್ಕಳಿಗೆ ಬೇಳೆ ಮತ್ತಿತರ ಕಾಳುಗಳ ಪುಡಿಯನ್ನು ಎಂಎಸ್ಪಿಟಿಸಿ ಸಂಸ್ಥೆಯಿಂದ ನೀಡಲಾಗುತ್ತಿದೆ. ಅವುಗಳನ್ನು ಕಾಳು ರೂಪದಲ್ಲೇ ನೀಡಬೇಕೆಂಬ ಬೇಡಿಕೆ ಇದೆ ಎಂದು ಜಿಪಂ ಸಿಇಒ ಡಾ. ಪಿ ರಾಜಾ ಅವರು ಸಭೆಯ ಗಮನಕ್ಕೆ ತಂದರು.
ಇನ್ನು ಮೊಟ್ಟೆಗಳನ್ನು ಮಕ್ಕಳಿಗೆ ಸಮರ್ಪಕವಾಗಿ ವಿತರಣೆ ಮಾಡುವ ನಿಟ್ಟಿನಲ್ಲಿ ಟೆಂಡರ್ ಕರೆಯಲು ಕ್ರಮಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಮವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ ಅವರಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟುಗಳ ಉಪ ಯೋಜನೆಯಡಿ ಕಾರ್ಯಕ್ರಮ ಅನುಷ್ಠಾನದ ಕುರಿತ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡುತ್ತಿದ್ದರು.
ತೊಗರಿ, ಉದ್ದು, ಹೆಸರು, ಸೋಯಾಬೀನ್ ಬಿತ್ತನೆ ಬೀಜಗಳನ್ನು ಪ್ರತಿ ಕಿಲೋ ಗ್ರಾಂ.ಗೆ ಎಸ್ಸಿ-ಎಸ್ಟಿ ಜನಾಂಗದ ರೈತರಿಗೆ 37.50 ರೂಪಾಯಿ ಸಬ್ಸಿಡಿ ಹಾಗೂ ಇತರೆ ರೈತರಿಗೆ 25 ರೂಪಾಯಿ ಸಬ್ಸಿಡಿ ದರದಲ್ಲಿ ವಿತರಿಸಲಾಗುತ್ತದೆ ಎಂದರು.
ಭತ್ತದ ಬಿತ್ತನೆ ಬೀಜವನ್ನು ಎಸ್ಸಿ-ಎಸ್ಟಿ ಜನಾಂಗದ ರೈತರಿಗೆ 12 ರೂಪಾಯಿ ಸಬ್ಸಿಡಿ ಹಾಗೂ ಇತರೆ ರೈತರಿಗೆ 8 ರೂಪಾಯಿ ಸಬ್ಸಿಡಿ ದರದಲ್ಲಿ ನೀಡಲಾಗುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜ ಎಸ್ಸಿ-ಎಸ್ಟಿ ಜನಾಂಗದ ರೈತರಿಗೆ 120 ರೂಪಾಯಿ ಸಬ್ಸಿಡಿ ಹಾಗೂ ಇತರೆ ರೈತರಿಗೆ 80 ರೂಪಾಯಿ ಸಬ್ಸಿಡಿ ದರದಲ್ಲಿ ದೊರೆಯಲಿವೆ. ಹಾಗೆಯೇ ಸಜ್ಜೆ, ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನೂ ಸಬ್ಸಿಡಿ ದರದಲ್ಲಿ ವಿತರಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಬಿತ್ತನೆ ಬೀಜ ವಿತರಣೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ರತೇಂದ್ರನಾಥ ಸೂಗೂರು ಮಾತನಾಡಿ, 2019-20ನೇ ಸಾಲಿನಲ್ಲಿ ಎಸ್ಸಿಪಿ ಯೋಜನೆಯಡಿಯಲ್ಲಿ ಮುಂಗಾರು ಬಿತ್ತನೆ ಬೀಜಕ್ಕಾಗಿ ರಾಜ್ಯ ವಲಯದ ಅನುದಾನದಲ್ಲಿ 2 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈಗಾಗಲೇ 1.07 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಈ ಪೈಕಿ 1.01 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ವಾರ್ಷಿಕ 20651 ಫಲಾನುಭವಿಗಳ ಗುರಿ ಹೊಂದಲಾಗಿದ್ದು, ಇದುವರೆಗೆ 16004 ಫಲಾನುಭವಿ ರೈತರಿಗೆ 14 ಸಾವಿರ ಕ್ವಿಂಟಲ್ ಬಿತ್ತನೆ ಬೀಜ ವಿತರಿಸಲಾಗಿದೆ. ಇದುವರೆಗೆ ಶೇಕಡ 77.50ರಷ್ಟು ಸಾಧನೆ ಮಾಡಲಾಗಿದೆ ಎಂದು ಅಂಕಿ-ಅಂಶ ಸಹಿತ ಅವರು ವಿವರಿಸಿದರು.
ಜಿಪಂ ಸಿಇಒ ಡಾ. ಪಿ ರಾಜಾ ಮಾತನಾಡಿ, ತೋಟಗಾರಿಕಾ ಇಲಾಖೆಯ ಎಸ್ಸಿಪಿ-ಟಿಎಸ್ಪಿ ವಿಶೇಷ ಘಟಕ ಯೋಜನೆಗಳ ಪ್ರಗತಿ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಜಿಲ್ಲೆಯ ರೈತರು ಬೆಳೆದ ಹೂವು ಮತ್ತಿತರ ತೋಟಗಾರಿಕಾ ಉತ್ಪನ್ನಗಳನ್ನು ಹೈದ್ರಾಬಾದ್ ಮತ್ತಿತರ ಮಾರುಕಟ್ಟೆಗೆ ಸಾಗಿಸಲು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಜೊತೆ ಚರ್ಚಿಸಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಎಸ್ಸಿಪಿ ವಿಶೇಷ ಘಟಕ ಯೋಜನೆಯಡಿ ಹೆಣ್ಣು ಮಕ್ಕಳ ಭಾಗ್ಯಲಕ್ಷ್ಮೇ ಬಾಂಡ್ ವಿತರಣೆಯ ಗುರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.ಮೂರು ತಿಂಗಳಲ್ಲಿ ಕೇವಲ 254 ಫಲಾನುಭವಿಗಳ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಶಿಶುಗಳ ಜನನ ಪ್ರಮಾಣಕ್ಕೆ ಹೋಲಿಸಿದರೆ ಫಲಾನುಭವಿಗಳ ಸಂಖ್ಯೆ ತೀರಾ ಕಡಿಮೆ ಎಂದರು.
ಸಭೆಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೆ.ಸತೀಶ್ ಅವರು, ಎಸ್ಸಿಪಿ-ಟಿಎಸ್ಪಿ ವಿಶೇಷ ಘಟಕ ಯೋಜನೆಗಳ ಅಡಿಯಲ್ಲಿ 2018-19 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇಕಡ 95.45ರಷ್ಟು ಗುರಿ ಸಾಧಿಸಲಾಗಿದೆ. ಇನ್ನು 2019-20ನೇ ಸಾಲಿನಲ್ಲಿ ಜೂನ್ ಅಂತ್ಯದವರೆಗೆ ಶೇ.15.31ರಷ್ಟು ಸಾಧನೆ ತೋರಲಾಗಿದೆ ಎಂದರು.
ಮೊಟ್ಟೆ ಸಮರ್ಪಕ ವಿತರಣೆಗೆ ಸೂಚನೆ
ಅನುದಾನ ನಿಗದಿತ ಸಮಯಕ್ಕೆ ಬಿಡುಗಡೆಯಾಗದಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ಅಪೌಷ್ಟಿಕತೆ ನಿವಾರಣೆಗೆ ಮೊಟ್ಟೆ ಸರಿಯಾಗಿ ವಿತರಿಸಲಾಗುತ್ತಿಲ್ಲ ಎಂಬ ದೂರು ಇದೆ ಹಾಗೂ ಮಕ್ಕಳಿಗೆ ಬೇಳೆ ಮತ್ತಿತರ ಕಾಳುಗಳ ಪುಡಿಯನ್ನು ಎಂಎಸ್ಪಿಟಿಸಿ ಸಂಸ್ಥೆಯಿಂದ ನೀಡಲಾಗುತ್ತಿದೆ. ಅವುಗಳನ್ನು ಕಾಳು ರೂಪದಲ್ಲೇ ನೀಡಬೇಕೆಂಬ ಬೇಡಿಕೆ ಇದೆ ಎಂದು ಜಿಪಂ ಸಿಇಒ ಡಾ. ಪಿ ರಾಜಾ ಅವರು ಸಭೆಯ ಗಮನಕ್ಕೆ ತಂದರು.
ಇನ್ನು ಮೊಟ್ಟೆಗಳನ್ನು ಮಕ್ಕಳಿಗೆ ಸಮರ್ಪಕವಾಗಿ ವಿತರಣೆ ಮಾಡುವ ನಿಟ್ಟಿನಲ್ಲಿ ಟೆಂಡರ್ ಕರೆಯಲು ಕ್ರಮಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಮವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ ಅವರಿಗೆ ಸೂಚಿಸಿದರು.