ಆ್ಯಪ್ನಗರ

ದರೋಡೆಕೋರನ ಮೇಲೆ ಪೊಲೀಸ್‌ ಫೈರಿಂಗ್

ಅಫಜಲಪುರ ತಾಲೂಕಿನ ಗೊಬ್ಬುರ ಬಳಿ ದರೋಡೆಕೋರ ಅರ್ಜುನ್‌ ಎಂಬಾತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

Vijaya Karnataka Web 4 Dec 2017, 11:28 am
ಕಲಬುರಗಿ: ಅಫಜಲಪುರ ತಾಲೂಕಿನ ಗೊಬ್ಬುರ ಬಳಿ ದರೋಡೆಕೋರ ಅರ್ಜುನ್‌ ಎಂಬಾತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗಾಯಾಳು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Vijaya Karnataka Web police firing on thief
ದರೋಡೆಕೋರನ ಮೇಲೆ ಪೊಲೀಸ್‌ ಫೈರಿಂಗ್


ದರೋಡೆ, ಅಕ್ರಮ ಶಸ್ತಾಸ್ತ್ರ ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಬಂಧಿತನಿಂದ ಮೂರು ಕಂಟ್ರಿಮೇಡ್ ಪಿಸ್ತೂಲ್ ವಶಪಡಿಸಲಾಗಿದೆ.

ಗೊಬ್ಬುರ ಬಳಿ ಬಂಧನಕ್ಕೆ ತೆರಳಿದ್ದಾಗ ಆರೋಪಿಯು ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದ. ಘಟನೆಯಲ್ಲಿ ಮಹಾಗಾಂ ಪಿಎಸ್‌ಐ ಪ್ರದೀಪ್, ಡಿಸಿಆರ್ ಬಿ ಎಎಸ್‌ಐ ಶಿವಪ್ಪ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ