ಆ್ಯಪ್ನಗರ

ಕಲಬುರಗಿಯಲ್ಲಿ ಹುಡುಗಿ ವಿಷಯಕ್ಕೆ ಹೊಡೆದಾಟ: ಚಾಕು ಇರಿತಕ್ಕೆ ಬಲಿಯಾದ ಯುವಕ!

ಹುಡುಗಿಯೊಬ್ಬಳ ವಿಷಯಕ್ಕೆ ನಡೆದ ಹೊಡೆದಾಟದಲ್ಲಿ ಚಾಕು ಇರಿತಕ್ಕೆ ಒಳಗಾಗಿ ಓರ್ವ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಕಲಬುರಗಿಯ ಬಾಪು ನಗರದಲ್ಲಿ ಚಿರು ಅಲಿಯಾಸ್ ಚಿರಂಜೀವಿ ಪಾಟೀಲ್ ಹುಡುಗಿಯ ವಿಚಾರದಲ್ಲಿ ಹೊಡೆದಾಟಕ್ಕೆ ಇಳಿದು ಕೊಲೆಗೆ ಈಡಾಗಿದ್ದಾರೆ.

Vijaya Karnataka Web 25 Apr 2020, 12:59 pm
ಕಲಬುರಗಿ: ಹುಡುಗಿಯೊಬ್ಬಳ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಹೊಡೆದಾಟದಲ್ಲಿ ಚಾಕು ಇರಿತಕ್ಕೆ ಒಳಗಾಗಿ ಓರ್ವ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ.
Vijaya Karnataka Web knife stab


ಕಲಬುರಗಿಯ ಬಾಪು ನಗರದಲ್ಲಿ ಚಿರು ಅಲಿಯಾಸ್ ಚಿರಂಜೀವಿ ಪಾಟೀಲ್ ಹುಡುಗಿಯ ವಿಚಾರದಲ್ಲಿ ಹೊಡೆದಾಟಕ್ಕೆ ಇಳಿದು ಕೊಲೆಗೆ ಈಡಾಗಿದ್ದಾರೆ. ಬಾಪು ನಗರದ ಕಾಶಿನಾಥ ರಘುನಾಥ ಉಪಾಧ್ಯಾಯ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ರಾತ್ರಿ ಸುಮಾರು 10ರ ಆಸುಪಾಸಿನಲ್ಲಿ ಹುಡಗಿ ವಿಷಯಕ್ಕೆ ಸಂಬಂಧಿಸಿದಂತೆ ಇವರಿಬ್ಬರ ಮಧ್ಯೆ ಹೊಡೆದಾಟ ನಡೆದಿದೆ. ಈ ವೇಳೆ ಕಾಶಿನಾಥ ತನ್ನ ಬಳಿ ಇಟ್ಟುಕೊಂಡಿದ್ದ ಚಾಕುವಿನಿಂದ ಚಿರಂಜೀವಿಗೆ ತಿವಿದಿದ್ದಾನೆ.

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ; ಮತ್ತೆ 15 ಮಂದಿಗೆ ಪಾಸಿಟಿವ್‌, ಹೊಂಗಸಂದ್ರದಲ್ಲಿ ಬಿಹಾರಿ ಕಾರ್ಮಿಕನಿಂದ ಸೋಂಕು

ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಯುನೈಟೆಡ್‌ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಶನಿವಾರ ಬೆಳಗ್ಗೆ 9ಕ್ಕೆ ಕೊನೆಯುಸಿರೆಳೆದಿದ್ದಾನೆ.

ಕೊರೊನಾ ವೈರಸ್ ದ್ವಿಗುಣಗೊಳ್ಳುವ ಪ್ರಮಾಣ 10 ದಿನಗಳಿಗೆ ಏರಿಕೆ

ಜಿಲ್ಲಾಸ್ಪತ್ರೆಗೆ ಶವ ಸಾಗಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ