ಆ್ಯಪ್ನಗರ

ರಮೇಶ್‌ ಜಾರಕಿಹೊಳಿ ಪಕ್ಷ ಬಿಡಲ್ಲ: ಖರ್ಗೆ

ಶಾಸಕ ರಮೇಶ್‌ ಜಾರಕಿಹೊಳಿ ಪಕ್ಷ ಬಿಟ್ಟು ಹೋಗುವುದಿಲ್ಲ. ಜಾರಕಿಹೊಳಿ ಸಹೋದರರು ಪಕ್ಷದಲ್ಲೇ ಇದ್ದು ಕಾಂಗ್ರೆಸ್‌ ಬಲವರ್ಧನೆ ಮಾಡಲಿದ್ದಾರೆ. ರಾಜೀನಾಮೆ ನೀಡುತ್ತಾರೆ ಎನ್ನುವುದು ಕೇವಲ ಗಾಳಿ ಸುದ್ದಿ ಎಂದು ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Vijaya Karnataka 25 Dec 2018, 5:00 am
ಕಲಬುರಗಿ:ಶಾಸಕ ರಮೇಶ್‌ ಜಾರಕಿಹೊಳಿ ಪಕ್ಷ ಬಿಟ್ಟು ಹೋಗುವುದಿಲ್ಲ. ಜಾರಕಿಹೊಳಿ ಸಹೋದರರು ಪಕ್ಷದಲ್ಲೇ ಇದ್ದು ಕಾಂಗ್ರೆಸ್‌ ಬಲವರ್ಧನೆ ಮಾಡಲಿದ್ದಾರೆ. ರಾಜೀನಾಮೆ ನೀಡುತ್ತಾರೆ ಎನ್ನುವುದು ಕೇವಲ ಗಾಳಿ ಸುದ್ದಿ ಎಂದು ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
Vijaya Karnataka Web ramesh does not leave the party kharge
ರಮೇಶ್‌ ಜಾರಕಿಹೊಳಿ ಪಕ್ಷ ಬಿಡಲ್ಲ: ಖರ್ಗೆ


ಸೋಮವಾರ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಸಹೋದರರ ಮಧ್ಯೆ ಒಡಕು ಮೂಡಿಸಲು ಕೆಲವರು ಯತ್ನಿಸುತ್ತಿದ್ದಾರೆ. ಪಕ್ಷದಲ್ಲಿ ಯಾರೂ ರಮೇಶ್‌ ಅವರಿಗೆ ವಿಲನ್‌ ತರಹ ನೋಡಿಲ್ಲ. ಪಕ್ಷದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನ ಆಗುವ ನಂಬಿಕೆ ಇದೆ. ಪಕ್ಷಕ್ಕೆ ಬರುವಾಗ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುತ್ತಾರೆ. ರಾಜ್ಯ ನಾಯಕರು ಬಂಡಾಯ ಶಮನ ಮಾಡುತ್ತಾರೆ. ಅಸಮಾಧಾನ, ವೈಮನಸ್ಸು ಕೆಲ ದಿನಗಳ ಕಾಲ ಇದ್ದೇ ಇರುತ್ತದೆ. ಬಳಿಕ ಕರಗುತ್ತದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ