ಆ್ಯಪ್ನಗರ

ಕಲಬುರಗಿಯ ರಾವೂರ ರಥೋತ್ಸವ ಘಟನೆ: 13 ಜನರ ಬಂಧನ

ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಹೋಬಳಿಯ ರಾವೂರ ಗ್ರಾಮದಲ್ಲಿ ನಡೆದ ಗ್ರಾಮದೇವತೆ ರಥೋತ್ಸವ ಕುರಿತು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರವಾದ ವರದಿಯನ್ನು ಹೈಕೋರ್ಟ್‍ಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.

Vijaya Karnataka Web 21 Apr 2020, 6:06 pm
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಹೋಬಳಿಯ ರಾವೂರ ಗ್ರಾಮದಲ್ಲಿ ನಡೆದ ಗ್ರಾಮದೇವತೆ ರಥೋತ್ಸವ ಕುರಿತು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರವಾದ ವರದಿಯನ್ನು ಹೈಕೋರ್ಟ್‍ಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.
Vijaya Karnataka Web ravura rath


144ನೇ ಕಲಂ ನಿಷೇಧದ ಮಧ್ಯೆಯೂ ಗ್ರಾಮದ ಸಿದ್ದಲಿಂಗೇಶ್ವರ ಜಾತ್ರೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಟರ್ ಮ್ಯಾಜಿಸ್ಟ್ರಲ್ ಅಧಿಕಾರಿ ರಾಜಕುಮಾರ ರಾಠೋಡ್, ವಾಡಿ ಪಿಎಸ್‍ಐ ವಿಜಯುಕುಮಾರ ಬಾವಗಿ ಇಬ್ಬರನ್ನು ಅಮಾನತು ಮಾಡಲಾಗಿದೆ. ಸೇಡಂ ಆಯುಕ್ತರಿಗೆ, ಚಿತ್ತಾಪುರ ತಹಸೀಲ್ದಾರ್, ರಾವೂರ ಪಿಡಿಓ ಅವರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನ ಕಮಿಟಿ ಸದಸ್ಯರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದ್ದು, 20 ಜನ ಸದಸ್ಯರ ಪೈಕಿ 13 ಜನರನ್ನು ಬಂಧಿಸಲಾಗಿದೆ. ಅದಲ್ಲದೆ, ಜಾತ್ರೆಯಲ್ಲಿ ಭಾವಹಿಸಿದ ಕೆಲವರನ್ನು ಗುರುತಿಸಿ 200 ಜನರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಕಲಬುರಗಿ: ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ, ಪಿಎಸ್‌ಐ ತಲೆದಂಡ

ಇಡೀ ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದೆ. ಯಾವುದೇ ರೀತಿಯಿಂದ ಸೋಂಕು ಹರಡದಂತೆ ಎಚ್ಚರಿಕೆ ವಹಿಸಿದ್ದು, ಮುಂಜಾಗ್ರತ ಕ್ರಮವಾಗಿ ಗ್ರಾಮದ ಜನರಿಗೆ ಸ್ಕ್ರೀನಿಂಗ್ ಪರೀಕ್ಷೆ ನಡೆಸಲಾಗಿದೆ. ಎಲ್ಲ ರೀತಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಹೈಕೋರ್ಟ್‍ಗೆ ಸಮಗ್ರ ವರದಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಶರತ್ ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ