ಆ್ಯಪ್ನಗರ

ರೈಲ್ವೆ ವಿಭಾಗೀಯ ಕಚೇರಿ ಆರಂಭಕ್ಕೆ ಆಗ್ರಹ

ಕಲಬುರಗಿ ರೈಲ್ವೆ ವಿಭಾಗೀಯ ಕಚೇರಿ ಆರಂಭಕ್ಕೆ ಕೇಂದ್ರ ಸರಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜಾಗೃತಿ ಸಮಿತಿ ಕಾರ್ಯಕರ್ತರು ಬುಧವಾರ ಇಲ್ಲಿನ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.

Vijaya Karnataka 23 Aug 2018, 4:29 pm
ಕಲಬುರಗಿ : ಕಲಬುರಗಿ ರೈಲ್ವೆ ವಿಭಾಗೀಯ ಕಚೇರಿ ಆರಂಭಕ್ಕೆ ಕೇಂದ್ರ ಸರಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜಾಗೃತಿ ಸಮಿತಿ ಕಾರ್ಯಕರ್ತರು ಬುಧವಾರ ಇಲ್ಲಿನ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.
Vijaya Karnataka Web request to start railway divisional office
ರೈಲ್ವೆ ವಿಭಾಗೀಯ ಕಚೇರಿ ಆರಂಭಕ್ಕೆ ಆಗ್ರಹ


ಸಂಸದ ಹಾಗೂ ಮಾಜಿ ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೆ ಸಚಿವರಾಗಿದ್ದ ವೇಳೆ ಕಲಬುರಗಿ ವಿಭಾಗೀಯ ಕಚೇರಿ ಮಂಜೂರು ಮಾಡಿದ್ದರು. ಆದರೆ, ಕೇಂದ್ರದಲ್ಲಿ ಎನ್‌ಡಿಎ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಕಲಬುರಗಿ ವಿಭಾಗೀಯ ಕಚೇರಿ ಆರಂಭಕ್ಕೆ ಉದ್ದೇಶಪೂರ್ವಕವಾಗಿಯೇ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಆ ಮೂಲಕ ಹೈ.ಕ. ಭಾಗ ಹಿಂದುಳಿಯುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಎಂ.ಎಸ್‌.ಪಾಟೀಲ್‌ ನರಿಬೋಳ ಅಸಮಾಧಾನ ವ್ಯಕ್ತಪಡಿಸಿದರು.

ಕಲಬುರಗಿ-ಬೆಂಗಳೂರು ಮಧ್ಯೆ ಪ್ರತ್ಯೇಕ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭಿಸಬೇಕು. ಹೊಸ ಜೇವರ್ಗಿ ರಸ್ತೆಯ ಮೇಲೆ ನಿರ್ಮಿಸುತ್ತಿರುವ ರೈಲ್ವೆ ಓವರ್‌ ಬ್ರಿಡ್ಜ್‌ ಕಾಮಗಾರಿ ಆದಷ್ಟು ಶೀಘ್ರ ಮುಗಿಸಬೇಕು. ಕಲಬುರಗಿ ರೈಲ್ವೆ ನಿಲ್ದಾಣದ ಎಲ್ಲ ಪ್ಲಾಟ್‌ಫಾರಂಗಳ ಮೇಲೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇದರ ಜೊತೆಗೆ ಕ್ಯಾಂಟೀನ್‌ ಹಾಗೂ 24 ತಾಸು ಕಾರ್ಯನಿರ್ವಹಿಸುವ ಮೆಡಿಕಲ್‌ ಶಾಪ್‌ಗಳನ್ನು ಆರಂಭಿಸಬೇಕೆಂದರು.

ಶರಣಗೌಡ ಪಾಟೀಲ್‌ ಹರಸೂರ, ಗೌತಮ ಒಂಟಿ, ರಾಜು ನಡಕೇಶ್ವರ, ಇಂದಿರಾರೆಡ್ಡಿ, ಇಂದಿರಾ ಬನಶೆಟ್ಟಿ, ಶ್ವೇತಾ ಸಿಂಗ್‌, ಸಂಬಾಜಿ, ಸಾಯಿಪ್ರಸಾದ್‌, ಶರಣು ಪಾಟೀಲ್‌, ಶಿವಶರಣ, ಸಂತೋಷ್‌ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನೆಯ ನಂತರ ರೈಲ್ವೆ ಸ್ಟೇಷನ್‌ ಮ್ಯಾನೇಜರ್‌ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ