ಆ್ಯಪ್ನಗರ

ದೇ.ಗಾಣಗಾಪುರಕ್ಕೆ ರೂ.10 ಕೋಟಿ ಬಿಡುಗಡೆ

ಅಫಜಲಪುರ ತಾಲೂಕಿನ ಸುಕ್ಷೇತ್ರ ದೇವಲಗಾಣಗಾಪುರ ಗ್ರಾಮದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ರೂ. 10 ಕೋಟಿ ಬಿಡುಗಡೆ ಮಾಡಿದ್ದಾರೆ.

Vijaya Karnataka 20 Oct 2019, 9:32 pm
ಕಲಬುರಗಿ:ಅಫಜಲಪುರ ತಾಲೂಕಿನ ಸುಕ್ಷೇತ್ರ ದೇವಲಗಾಣಗಾಪುರ ಗ್ರಾಮದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ರೂ. 10 ಕೋಟಿ ಬಿಡುಗಡೆ ಮಾಡಿದ್ದಾರೆ.
Vijaya Karnataka Web rs 10 crore released to de ganagapura
ದೇ.ಗಾಣಗಾಪುರಕ್ಕೆ ರೂ.10 ಕೋಟಿ ಬಿಡುಗಡೆ


ಗುರುವಾರ ಮಧ್ಯಾಹ್ನ ಅವರು ಗಾಣಗಾಪುರದ ಶ್ರೀ ದತ್ತಾತ್ರೇಯ ದೇವರ ದರ್ಶನ ಪಡೆದ ಬಳಿಕ ದತ್ತನ ಸನ್ನಿಧಾನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಭೀಮಾ ಮತ್ತು ಅಮರ್ಜಾ ಸಂಗಮ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಸಂಪೂರ್ಣ ಅಭಿವೃದ್ಧಿಗೆ ತಕ್ಷಣ ರೂ. 10 ಕೋಟಿ ಬಿಡುಗಡೆ ಮಾಡುವುದಾಗಿ ವಾಗ್ದಾನ ಮಾಡಿದ್ದರು. ಇತ್ತ ಕಲಬುರಗಿ ಏರ್‌ಪೋರ್ಟ್‌ ಮೂಲಕ ವಿಶೇಷ ವಿಮಾನದಲ್ಲಿಬೆಂಗಳೂರು ತಲುಪುತ್ತಿದ್ದಂತೆಯೇ ಸಿಎಂ ಯಡಿಯೂರಪ್ಪ ಅವರು ಹಣ ಮಂಜೂರಾತಿ ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ. ಹೀಗಾಗಿ, ಶುಕ್ರವಾರ ಈ ಕುರಿತು ರಾಜ್ಯ ಸರಕಾರದ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಎಚ್‌.ಎ.ಶೋಭ ಅವರು ಧಾರ್ಮಿಕ ಸ್ಥಳಗಳಲ್ಲಿಮೂಲಸೌಕರ್ಯ ಹಾಗೂ ವಸತಿ ವ್ಯವಸ್ಥೆ -386-ನಿರ್ಮಾಣದ ಅಡಿ ರೂ.10 ಕೋಟಿ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ.



ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ