ಆ್ಯಪ್ನಗರ

ರೂ. 247 ಕೋಟಿ ಎಚ್‌ಕೆಆರ್‌ಡಿಬಿ ಕ್ರಿಯಾ ಯೋಜನೆ

ಜಿಲ್ಲೆಗೆ 2018-19ನೇ ಸಾಲಿನಲ್ಲಿ ಎಚ್‌ಕೆಆರ್‌ಡಿಬಿ ಮೈಕ್ರೋ ಮತ್ತು ಮ್ಯಾಕ್ರೋ ನಿಧಿ ಅಡಿ ಹಂಚಿಕೆ ಮಾಡಲಾದ ರೂ. 247.91 ಕೋಟಿಗೆ ಸಿದ್ಧಪಡಿಸಲಾದ ಕ್ರಿಯಾ ಯೋಜನೆಗೆ ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಎಚ್‌ಕೆಆರ್‌ಡಿಬಿ ಜಿಲ್ಲಾ ಸಲಹಾ ಸಮಿತಿ ಸಭೆ ಅನುಮೋದನೆ ನೀಡಿತು.

Vijaya Karnataka 3 Nov 2018, 4:32 pm
ಕಲಬುರಗಿ: ಜಿಲ್ಲೆಗೆ 2018-19ನೇ ಸಾಲಿನಲ್ಲಿ ಎಚ್‌ಕೆಆರ್‌ಡಿಬಿ ಮೈಕ್ರೋ ಮತ್ತು ಮ್ಯಾಕ್ರೋ ನಿಧಿ ಅಡಿ ಹಂಚಿಕೆ ಮಾಡಲಾದ ರೂ. 247.91 ಕೋಟಿಗೆ ಸಿದ್ಧಪಡಿಸಲಾದ ಕ್ರಿಯಾ ಯೋಜನೆಗೆ ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಎಚ್‌ಕೆಆರ್‌ಡಿಬಿ ಜಿಲ್ಲಾ ಸಲಹಾ ಸಮಿತಿ ಸಭೆ ಅನುಮೋದನೆ ನೀಡಿತು.
Vijaya Karnataka Web rs 247 crore hkrdb action plan
ರೂ. 247 ಕೋಟಿ ಎಚ್‌ಕೆಆರ್‌ಡಿಬಿ ಕ್ರಿಯಾ ಯೋಜನೆ


2018-19ನೇ ಸಾಲಿನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮೈಕ್ರೋ ನಿಧಿಯಡಿ ರೂ. 7797.88 ಲಕ್ಷ ಹಾಗೂ ಮ್ಯಾಕ್ರೋ ನಿಧಿಯಡಿ 3341.78 ಲಕ್ಷ ರೂ. ಮೀಸಲಿರಿಸಲಾಗಿದೆ. ಸಾಂಸ್ಥಿಕ ವಲಯದಡಿ ಸಂಸ್ಥೆಗಳಿಗೆ ನೆರವು ನೀಡಲು ಮೈಕ್ರೋ ಯೋಜನೆಯಡಿ ರೂ. 9555.98 ಲಕ್ಷ ಹಾಗೂ ಮ್ಯಾಕ್ರೊ ಅಡಿ ರೂ. 4095.43 ಲಕ್ಷ ವಿನಿಯೋಗಿಸಲಾಗುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿ ಆಯಾ ತಾಲೂಕಿಗೆ ಹಂಚಿಕೆ ಮಾಡಲಾದ ಅನುದಾನಕ್ಕೆ ಸಭೆ ಒಪ್ಪಿಗೆ ಸೂಚಿಸಿತು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಜಿಲ್ಲೆಗೆ ಹಂಚಿಕೆಯಾಗಿರುವ ಅನುದಾನ ಕೇವಲ ನಗರಗಳಿಗೆ ಸೀಮಿತಗೊಳಿಸದೆ ಸಂಪೂರ್ಣ ಜಿಲ್ಲೆಗೆ ಹಂಚಿಕೆಯಾಗಬೇಕು. ಶೇ.10ರಷ್ಟು ಅನುದಾನ ಪಟ್ಟಣದ ಸೌಂದರ್ಯೀಕರಣಕ್ಕೆ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿರುವ ಸಿಮೆಂಟ್‌ ಕಂಪನಿಗಳು ತಮ್ಮ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್‌) ನಿರ್ವಹಿಸಬೇಕಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಿಮೆಂಟ್‌ ಕಂಪನಿಗಳ ನೆರವು ಪಡೆಯಬೇಕು.ಎಚ್‌.ಕೆ.ಆರ್‌.ಡಿ.ಬಿ. ಕಾಮಗಾರಿಗಳು ಕೈಗೆತ್ತಿಕೊಳ್ಳುವ ಮುನ್ನ ಸಂಬಂಧಿಸಿದ ಶಾಸಕರ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ ಮಾತನಾಡಿದರು. ಕಲಬುರಗಿ ಜಿಪಂ. ಅಧ್ಯಕ್ಷೆ ಸುವರ್ಣಾ ಎಚ್‌.ಮಲಾಜಿ, ಶಾಸಕರಾದ ಸುಭಾಷ್‌ ಗುತ್ತೇದಾರ, ದತ್ತಾತ್ರೇಯ ಪಾಟೀಲ್‌ ರೇವೂರ, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ್‌ ತೇಲ್ಕೂರ, ಅಫಜಲಪುರ ತಾಪಂ ಅಧ್ಯಕ್ಷೆ ರುಕ್ಮಿಣಿ, ಸೇಡಂ ತಾಪಂ. ಅಧ್ಯಕ್ಷೆ ಇಂದ್ರಾದೇವಿ, ವಾಡಿ ಪುರಸಭೆ ಅಧ್ಯಕ್ಷೆ ಮೈನಾಬಾಯಿ ಗೋಪಾಲ್‌, ಜಿಪಂ. ಸಿಇಒ ಡಾ.ರಾಜಾ ಪಿ., ಐ.ಎ.ಎಸ್‌. ಪೊ›ಬೇಷನರಿ ಅಧಿಕಾರಿ ಸುಧಾಕರ ಸ್ನೇಹಲ್‌ ಲೋಖಂಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಇದ್ದರು.

ರೂ. 1500 ಕೋಟಿ ಬರುತ್ತೆ

ಕಳೆದ ವರ್ಷದಂತೆ ಪ್ರಸಕ್ತ 2018-19ನೇ ಸಾಲಿನಲ್ಲಿಯೂ 1500 ಕೋಟಿ ರೂ. ಅನುದಾನವನ್ನು ಎಚ್‌ಕೆಆರ್‌ಡಿಬಿಗೆ ನೀಡಲು ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ. ಹೀಗಾಗಿ, ಹೈ.ಕ. ಭಾಗದ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲಎಂದು ಸಚಿವ ಪ್ರಿಯಾಂಕ್‌ ಸಭೆಯಲ್ಲಿ ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ