ಆ್ಯಪ್ನಗರ

ವಿಜ್ಞಾನ ಮೇಳ ಜ್ಞಾನ ವೃದ್ಧಿಗೆ ಸಹಕಾರಿ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯ ಆಶ್ರಯದಲ್ಲಿ ನಗರದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎರಡು ದಿನದ ವಿಜ್ಞಾನ ಮೇಳ ಹಾಗೂ ಪ್ರದರ್ಶನ ನಡೆಯಿತು.

Vijaya Karnataka 30 Mar 2019, 5:00 am
ಕಲಬುರಗಿ:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯ ಆಶ್ರಯದಲ್ಲಿ ನಗರದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎರಡು ದಿನದ ವಿಜ್ಞಾನ ಮೇಳ ಹಾಗೂ ಪ್ರದರ್ಶನ ನಡೆಯಿತು.
Vijaya Karnataka Web science fair will help enhance knowledge
ವಿಜ್ಞಾನ ಮೇಳ ಜ್ಞಾನ ವೃದ್ಧಿಗೆ ಸಹಕಾರಿ


ಬೆಂಗಳೂರಿನ ಕೆಎಸ್‌ಟಿಎ ಸದಸ್ಯ ಡಾ.ಪಿ.ಎಸ್‌.ಶಂಕರ್‌ ಚಾಲನೆ ನೀಡಿ ಮಾತನಾಡುತ್ತಾ, ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ವಿಜ್ಞಾನ ವಸ್ತುಪ್ರದರ್ಶನ ಮಾಡುವುದರಿಂದ ಜ್ಞಾನ ವೃದ್ಧಿಗೆ ಸಹಾಯವಾಗಲಿದೆ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಹೊಸ ಹೊಸ ಪ್ರಯೋಗಗಳನ್ನು ಮಾಡುವುದರಿಂದ ಚಿಂತನಾ ಸಾಮರ್ಥ್ಯ‌ ಹಾಗೂ ವೈಜ್ಞಾನಿಕ ಮನೋಭಾವ ಹೆಚ್ಚುತ್ತದೆ. ಮಕ್ಕಳಲ್ಲಿ ಅಡಗಿರುವ ವಿಜ್ಞಾನ ಜ್ಞಾನದ ಬೆಳವಣಿಗೆಗೆ ಪಠ್ಯದ ಜತೆಗೆ ಪ್ರದರ್ಶನ ಚಟುವಟಿಕೆ ಕೂಡ ಸಹಕಾರಿಯಾಗುವುದು ಎಂದರು.

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳಸಿಕೊಳ್ಳುವುದರ ಮೂಲಕ ದಿನೇದಿನೆ ಸುಧಾರಣೆಗೆ ಒಳಪಡುತ್ತಲೇ ಇರುವ ತಂತ್ರಜ್ಞಾನಕ್ಕೆ ತಕ್ಕಂತೆ ಅಪ್‌ಡೇಟ್‌ ಆಗಬೇಕಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರೊಂದಿಗೆ ಪಠ್ಯಕ್ಕೆ ಸಂಬಂಧಿಸಿದಂತೆ ಕ್ಲಿಷ್ಟ ಸಮಸ್ಯೆಗಳನ್ನು ಶಿಕ್ಷಕರ ಗಮನಕ್ಕೆ ತಂದು ತಕ್ಷಣ ಪರಿಹರಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಡಾ.ಎಸ್‌.ಟಿ.ಸುಲೇಪೇಟಕರ್‌, ಡಾ.ಆರ್‌.ಕೆ.ಶಿಕಾರಗೋಳ್‌ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನಿಖಿತಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಅನ್ನಪೂರ್ಣ ಟಕ್ಕಳಕಿ ಹಾಗೂ ರಾಘವೇಂದ್ರ ನಿರೂಪಿಸಿದರು. ಅಕ್ಷತಾ ಪಾಟೀಲ್‌ ವಂದಿಸಿದರು.

ಇಂದಿನ ವಿಜ್ಞಾನದ ಬೆಳವಣಿಗೆಗೆ ಪ್ರಾಚೀನ ಕಾಲದ ಕೊಡುಗೆ ಅಪಾರ. ಹಿಂದಿನವರು ಆವಿಷ್ಕರಿಸಿದ ಸಂಗತಿಗಳಿಂದ ವಿಜ್ಞಾನ ಕ್ಷೇತ್ರದಲ್ಲಿ ಇಂದು ದೊಡ್ಡ ಸಾಧನೆ ಮಾಡಲು ಸಾಧ್ಯವಾಗಿದೆ. ಹೊಸ ತಲೆಮಾರಿನ ವಿದ್ಯಾರ್ಥಿಗಳು ಸಹ ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಸಂಶೋಧನೆ ಕೈಗೊಳ್ಳಬೇಕು.

-ಡಾ.ಎಸ್‌.ಜಿ.ಡೊಳ್ಳೆಗೌಡ್ರು, ಪ್ರಾಚಾರ್ಯ, ಎಸ್‌.ಬಿ.ವಿಜ್ಞಾನ ಕಾಲೇಜು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ