ಆ್ಯಪ್ನಗರ

ಶಾಮನೂರ ಡಿಸಿಎಂ ಆಗಲಿ:ನರಿಬೋಳ

ವೀರಶೈವ ಸಮಾಜದ ನಾಯಕ ಡಾ.ಶಾಮನೂರ ಶಿವಶಂಕರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವೀರಶೈವ ಲಿಂಗಾಯತ ಸ್ವಾಭಿಮಾನಿಗಳ ಬಳಗದ ಅಧ್ಯಕ್ಷ ಎಂ.ಎಸ್‌.ಪಾಟೀಲ್‌ ನರಿಬೋಳ ಒತ್ತಾಯಿಸಿದರು.

Vijaya Karnataka 22 May 2018, 4:45 pm
ಕಲಬುರಗಿ : ವೀರಶೈವ ಸಮಾಜದ ನಾಯಕ ಡಾ.ಶಾಮನೂರ ಶಿವಶಂಕರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವೀರಶೈವ ಲಿಂಗಾಯತ ಸ್ವಾಭಿಮಾನಿಗಳ ಬಳಗದ ಅಧ್ಯಕ್ಷ ಎಂ.ಎಸ್‌.ಪಾಟೀಲ್‌ ನರಿಬೋಳ ಒತ್ತಾಯಿಸಿದರು.
Vijaya Karnataka Web shamanoor dcm naribola
ಶಾಮನೂರ ಡಿಸಿಎಂ ಆಗಲಿ:ನರಿಬೋಳ


ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಸಮ್ಮಿಶ್ರ ಸರಕಾರದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಾಜಿ ಸಚಿವ ಈಶ್ವರ ಖಂಡ್ರೆಯವರಿಗೆ ಉನ್ನತ ಸ್ಥಾನಮಾನ ನೀಡಬೇಕು. ಒಂದು ವೇಳೆ ಇದಕ್ಕೆ ತದ್ವಿರುದ್ಧ ನಿರ್ಣಯಗಳನ್ನು ತೆಗೆದುಕೊಂಡರೆ ಶಾಮನೂರ ಹಾಗೂ ಖಂಡ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮೈತ್ರಿಯಿಂದ ಹೊರಬೇಕು ಎಂದು ಆಗ್ರಹಿಸಿದರು.

ಈ ಇಬ್ಬರೂ ಮುಖಂಡರು ಪಕ್ಷನಿಷ್ಠರಾಗಿ ಅಲ್ಲಿಯೇ ಮುಂದುವರಿಯುವುದಾದರೆ ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದರೆ ನಾಡಿನ ಸಾವಿರಾರು ಮಠಾಧಿಧೀಶರು ಮತ್ತು ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗದ ಲಕ್ಷಾಂತರ ಅಭಿಮಾನಿಗಳು ಒಂದಾಗಿ ದಾವಣಗೆರೆ ಹಾಗೂ ಬೆಂಗಳೂರಿನ ಮಹಾಸಭಾ ಕಚೇರಿ ಎದುರು ಹೋರಾಟ ನಡೆಸಲಿದ್ದಾರೆ ಎಂದರು.

ರಾಜುಗೌಡ ನಾಗನಳ್ಳಿ ಹಾಗೂ ಇನ್ನಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ