ಆ್ಯಪ್ನಗರ

ಪ್ರತ್ಯೇಕ ರಾಜ್ಯಕ್ಕಾಗಿ ಸಹಿ ಸಂಗ್ರಹ ಅಭಿಯಾನ

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಸಂವಿಧಾನ ತಜ್ಞರ ಸಮಿತಿ ರಚಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸೋಮವಾರ ನಗರದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿತು.

Vijaya Karnataka 7 Aug 2018, 6:09 pm
ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಸಂವಿಧಾನ ತಜ್ಞರ ಸಮಿತಿ ರಚಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸೋಮವಾರ ನಗರದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿತು.
Vijaya Karnataka Web signature campaign for a separate state
ಪ್ರತ್ಯೇಕ ರಾಜ್ಯಕ್ಕಾಗಿ ಸಹಿ ಸಂಗ್ರಹ ಅಭಿಯಾನ


ಸಮಿತಿಯ ಈ ಹೋರಾಟಕ್ಕೆ ವಕೀಲರು, ವಿವಿಧ ಸಂಘಟನೆಗಳ ಮುಖಂಡರು ಸಾಥ್‌ ನೀಡಿದರು.

ನಗರದ ಸರದಾರ ವಲ್ಲಭಬಾಯಿ ಪಟೇಲ್‌ ವೃತ್ತದಲ್ಲಿ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಹಿರಿಯ ನ್ಯಾಯವಾದಿ ರಾಮರಾವ ಕುಲಕರ್ಣಿ ಚಾಲನೆ ನೀಡಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ತೀವ್ರಗೊಳಿಸಬೇಕು ಎಂದರು.

ಸಮಿತಿ ಅಧ್ಯಕ್ಷ ಎಂ.ಎಸ್‌.ಪಾಟೀಲ್‌ ನರಿಬೋಳ ಮಾತನಾಡಿ, ಈ ಭಾಗದ ರಾಜಕೀಯ ಮುಖಂಡರು, ವಿದ್ಯಾರ್ಥಿಗಳು, ಪ್ರಗತಿಪರ ಸಂಘಟನೆಗಳ,ವಿವಿಧ ಮಠಾಧೀಶರ ಹೋರಾಟದಿಂದಾಗಿ ಈ ಭಾಗಕ್ಕೆ 371(ಜೆ)ಕಲಂ ಜಾರಿಗೆ ಬಂದರೂ ಸಮರ್ಪಕವಾಗಿ ಅನುಷ್ಠಾನ ಆಗುತ್ತಿಲ್ಲ. ಇದಕ್ಕೆ ಮುಂಬೈ-ಕರ್ನಾಟಕದ ಮತ್ತು ದಕ್ಷಿಣ ಕರ್ನಾಟಕ ರಾಜಕಾರಣಿಗಳ ಕುತಂತ್ರವೇ ಕಾರಣವಾಗಿದೆ ಎಂದು ದೂರಿದರು.

ಹೈ.ಕ ಪ್ರದೇಶ ಸರ್ವಾಂಗೀಣ ಅಭಿವೃದ್ಧಿಯಾಗಬೇಕಾದರೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯದಿಂದ ಮಾತ್ರ ಸಾಧ್ಯ.ಹೀಗಾಗಿ ತಾವು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.

ಒಂದು ಲಕ್ಷ ಸಹಿ ಸಂಗ್ರಹಿಸಿ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಮುಂಬರುವ ನವೆಂಬರ್‌ ತಿಂಗಳೊಳಗೆ ತಜ್ಞರ ಸಮಿತಿ ರಚನೆಗೆ ಮುಂದಾಗದಿದ್ದರೆ ನ. 1 ರಂದು ಹೈ.ಕ ಪ್ರದೇಶದ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಿ ತೆಲಂಗಾಣ ಮಾದರಿ ಹೋರಾಟಕ್ಕಿಳಿಯಲಾಗುವುದು ಎಂದರು.

ವಿನೋದ ಕುಮಾರ ಜೆನೇವರಿ, ಶ್ವೇತಾಸಿಂಗ, ಶೇಖರ ನಾಟೀಕರ ಸೇಡಂ, ಗೌತಮ ಒಂಟಿ, ಇಂದ್ರಾ ಬನಶೆಟ್ಟಿ, ಬಸವರಾಜ ಮುಧೋಳ,ಬೀರಣ್ಣ ಪೂಜಾರಿ, ಮಲ್ಲಿಕಾರ್ಜುನ ಪಾಟೀಲ್‌, ಲಖನ ಸೇರಿದಂತೆ ಇನ್ನಿತರ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ