ಬಿಎಸ್ವೈ ಸಿಎಂ ಆಗಲೆಂದು ವಿಶೇಷ ಪೂಜೆ
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಲಿ ಎಂದು ಪ್ರಾರ್ಥಿಸಿ ಬಿಜೆಪಿ ಜಿಲ್ಲಾ ಘಟಕದಿಂದ ವಿಶೇಷ ಪೂಜೆ, ಅಭಿಷೇಕ ಮಾಡಲಾಯಿತು.
Vijaya Karnataka 18 Jul 2019, 9:06 pm
ಬೀದರ್ :ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಲಿ ಎಂದು ಪ್ರಾರ್ಥಿಸಿ ಬಿಜೆಪಿ ಜಿಲ್ಲಾ ಘಟಕದಿಂದ ವಿಶೇಷ ಪೂಜೆ, ಅಭಿಷೇಕ ಮಾಡಲಾಯಿತು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಬಡಾವಣೆಯಲ್ಲಿರುವ ಸಾಯಿ ಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆಯ ವಿಶೇಷ ದಿನವಾದ ಮಂಗಳವಾರ ಬಿಜೆಪಿ ಜಿಲ್ಲಾ ಘಟಕದಿಂದ ವಿಶೇಷ ಪೂಜೆ ಜರುಗಿತು.
ಬಿ.ಎಸ್. ಯಡಿಯೂರಪ್ಪ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಹಾಗೂ ನಾಡಿನಲ್ಲಿ ಉತ್ತಮವಾಗಿ ಮಳೆಯಾಗಲಿ, ಸಮೃದ್ಧವಾಗಿ ಬೆಳೆಗಳು ಬೆಳೆಯಲಿ, ಎಲ್ಲರೂ ಸುಖಿಯಾಗಿ ಬದುಕಲಿ, ರಾಜ್ಯದಲ್ಲಿ ಸುಃಖ, ಶಾಂತಿ, ನೆಮ್ಮದಿಯ ವಾತಾವರಣ ನಿರ್ಮಾಣವಾಗಲಿ ಎಂದು ದೇವರಿಗೆ ಪ್ರಾರ್ಥಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಾಬು ವಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈಶ್ವರ ಸಿಂಗ್ ಠಾಕೂರ್, ಜಯಕುಮಾರ ಕಾಂಗೆ, ನಗರಾಧ್ಯಕ್ಷ ರಾಜಕುಮಾರ ಚಿದ್ರಿ, ಮಹೇಶ್ ಪಾಲಂ, ಬಸವರಾಜ್ ಜೋಜನಾ, ನಂದ ಕಿಶೋರ ವರ್ಮಾ ಸೇರಿದಂತೆ ಬಿಜೆಪಿ ಪಕ್ಷ ಕಾರ್ಯಕರ್ತರು ಹಾಗೂ ಇತರರು ಇದ್ದರು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಬಡಾವಣೆಯಲ್ಲಿರುವ ಸಾಯಿ ಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆಯ ವಿಶೇಷ ದಿನವಾದ ಮಂಗಳವಾರ ಬಿಜೆಪಿ ಜಿಲ್ಲಾ ಘಟಕದಿಂದ ವಿಶೇಷ ಪೂಜೆ ಜರುಗಿತು.
ಬಿ.ಎಸ್. ಯಡಿಯೂರಪ್ಪ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಹಾಗೂ ನಾಡಿನಲ್ಲಿ ಉತ್ತಮವಾಗಿ ಮಳೆಯಾಗಲಿ, ಸಮೃದ್ಧವಾಗಿ ಬೆಳೆಗಳು ಬೆಳೆಯಲಿ, ಎಲ್ಲರೂ ಸುಖಿಯಾಗಿ ಬದುಕಲಿ, ರಾಜ್ಯದಲ್ಲಿ ಸುಃಖ, ಶಾಂತಿ, ನೆಮ್ಮದಿಯ ವಾತಾವರಣ ನಿರ್ಮಾಣವಾಗಲಿ ಎಂದು ದೇವರಿಗೆ ಪ್ರಾರ್ಥಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಾಬು ವಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈಶ್ವರ ಸಿಂಗ್ ಠಾಕೂರ್, ಜಯಕುಮಾರ ಕಾಂಗೆ, ನಗರಾಧ್ಯಕ್ಷ ರಾಜಕುಮಾರ ಚಿದ್ರಿ, ಮಹೇಶ್ ಪಾಲಂ, ಬಸವರಾಜ್ ಜೋಜನಾ, ನಂದ ಕಿಶೋರ ವರ್ಮಾ ಸೇರಿದಂತೆ ಬಿಜೆಪಿ ಪಕ್ಷ ಕಾರ್ಯಕರ್ತರು ಹಾಗೂ ಇತರರು ಇದ್ದರು.