ಆ್ಯಪ್ನಗರ

ಕಲಬುರಗಿ: ಹೆತ್ತವರ ಒತ್ತಾಯಕ್ಕೆ ಶಾಲೆಗೆ ತೆರಳಿದ್ದ ವಿದ್ಯಾರ್ಥಿ ಆತ್ಮಹತ್ಯೆ!

ಹೆತ್ತವರ ಒತ್ತಾಯಕ್ಕೆ ಶಾಲೆಗೆ ಹೋಗಲು ನೊಂದುಕೊಂಡಿದ್ದ ಬಾಲಕನೊಬ್ಬ ಶಾಲೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.

Vijaya Karnataka Web 10 Apr 2021, 9:53 pm
ಕಲಬುರಗಿ: ನಗರದ ಮದೀನಾ ಕಾಲೊನಿಯಲ್ಲಿರುವ ಖಾಸಗಿ ಶಾಲೆಯೊಂದರದಲ್ಲಿ ಮೆಟ್ರಿಕ್‌ ಓದುತ್ತಿರುವ ವಿದ್ಯಾರ್ಥಿಯೊಬ್ಬ, ಹೆತ್ತವರ ಒತ್ತಾಯಕ್ಕೆ ಶಾಲೆಗೆ ಹೋಗಿದ್ದಾಗ ನೊಂದುಕೊಂಡಿದ್ದ ಆತ ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಶಾಲಾ ಅವಧಿಯಲ್ಲಿ ನಡೆದಿದೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ಆತ್ಮಹತ್ಯೆಗೆ ಒಳಗಾದ ವಿದ್ಯಾರ್ಥಿಯನ್ನು ಮದೀನಾ ಕಾಲೊನಿಯ ಶೇಖ್‌ ಮೆಹಬೂಬ್‌ (16) ಎಂದು ಗುರುತಿಸಲಾಗಿದೆ. ಶಾಲೆಯಲ್ಲಿನ ಕಬ್ಬಿಣದ ಸರಳಿಗೆ ಹಗ್ಗದಿಂದ ನೇಣು ಹಾಕಿಕೊಂಡಿದ್ದಾನೆ. ಆತ ತುಸು ಮಾನಸಿಕ ಅಸ್ವಸ್ಥನಾಗಿದ್ದ, ಯಾವುದೇ ವಿಚಾರವನ್ನು ಹೆಚ್ಚು ಗಂಭೀರವಾಗಿ ಸ್ವೀಕರಿಸುತ್ತಿದ್ದ ಎಂದು ತಿಳಿದು ಬಂದಿದೆ.

ಘಟನೆ ನಡೆದಾಗ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು. ಇದರಿಂದ ಘಟನೆ ನಡೆದಿರುವುದು ಬಹಳ ಹೊತ್ತಿನ ಬಳಿಕ ಶಾಲೆ ಸಿಬ್ಬಂದಿ ಗಮನಕ್ಕೆ ಬಂದಿದೆ. ಅಷ್ಟರೊಳಗೆ ವಿದ್ಯಾರ್ಥಿ ಸಾವನ್ನಪ್ಪಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಆರ್‌.ಜಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ