ಆ್ಯಪ್ನಗರ

ನಿರಂತರ ಅಧ್ಯಯನದಿಂದ ಯಶಸ್ಸು

ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಮಹಾನಗರ ಪಾಲಿಕೆ ಆಯುಕ್ತೆ ಬಿ.ಫೌಜಿಯಾ ತರನ್ನುಮ್‌ ಹೇಳಿದರು.

Vijaya Karnataka 31 May 2019, 5:00 am
ಕಲಬುರಗಿ :ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಮಹಾನಗರ ಪಾಲಿಕೆ ಆಯುಕ್ತೆ ಬಿ.ಫೌಜಿಯಾ ತರನ್ನುಮ್‌ ಹೇಳಿದರು.
Vijaya Karnataka Web success from continuous study
ನಿರಂತರ ಅಧ್ಯಯನದಿಂದ ಯಶಸ್ಸು


ನಗರದ ಗುಲ್ಬರ್ಗ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಲ್ಲಿ ಹಮ್ಮಿಕೊಂಡ ಪ್ರಸಕ್ತ ಶೈಕ್ಷಣಿಕ ಸಾಲಿನ ಕಾರ್ಯಚಟುವಟಿಕೆಗಳ ಮುಕ್ತಾಯ ಹಾಗೂ ಹಿರಿಯ ವಿದ್ಯಾರ್ಥಿಳಿಗೆ ಕಿರಿಯ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.ಇಂದಿನ ಯುವಕರಲ್ಲಿ ಆತ್ಮ ವಿಶ್ವಾಸದ ಕೊರತೆ ಇದೆ. ಅದನ್ನು ನೀಗಿಸುವ ಪ್ರಯತ್ನ ನಮ್ಮದಾಗಬೇಕು ಎಂದರು.

ಆದಾಯ ತೆರಿಗೆ ಇಲಾಖೆಯ ಉಪ ಆಯುಕ್ತ ಬಾಬುರಾವ್‌ ದೊರೆ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ನಡುವೆ ಉತ್ತಮವಾದ ಸಂಬಂಧವಿರಬೇಕು.ಮೊದಲ್ಲೇ ಏನಾಗಬೇಕು ಎಂಬ ಕನಸನ್ನು ನನಸಾಗಿಸಿಕೊಳ್ಳಲು ಶ್ರಮಪಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಜಿ ಶ್ರೀರಾಮುಲು ಅಧ್ಯಕ್ಷತೆ ವಹಿಸಿದರು. ರಾಜ್ಯಶಾಸ್ತ್ರ ಸಂಘದ ಸಂಘಟನಾ ಕಾರ್ಯದರ್ಶಿ ರಾಹುಲ್‌ ಮೆಹೇಂದ್ರಿ, ಪೊ›.ಪಿ.ಬಿ.ರಾಠೋಡ್‌,ಪೊ›.ಚಂದ್ರಕಾಂತ ಯಾತನೂರು,

ಸುಮಲತಾ ಪ್ರಾರ್ಥಿಸಿದರು.ಪೂಜಾ ಸ್ವಾಗತಿಸಿದರು. ನಾಗೇಶ್‌ ಹೆರೂರು ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ