ಆ್ಯಪ್ನಗರ

ಇಂಗ್ಲಿಷ್‌ ಮಾದ್ಯಮ ಶಾಲೆಗೆ ಬೆಂಬಲ

ಧಾರವಾಡದಲ್ಲಿ ನಡೆದ 84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಇಂಗ್ಲಿಷ್‌ ಮಾಧ್ಯಮ ಶಾಲೆಗೆ ವಿರೋಧ ವ್ಯಕ್ತಪಡಿಸಿದ್ದು ದುರಂತದ ಸಂಗತಿ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಹಿರಿಯ ದಲಿತ ಮುಖಂಡ ಗುರುಶಾಂತ ಪಟ್ಟೇದಾರ ಹೇಳಿದರು.

Vijaya Karnataka 9 Jan 2019, 5:29 pm
ಕಲಬುರಗಿ ;ಧಾರವಾಡದಲ್ಲಿ ನಡೆದ 84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಇಂಗ್ಲಿಷ್‌ ಮಾಧ್ಯಮ ಶಾಲೆಗೆ ವಿರೋಧ ವ್ಯಕ್ತಪಡಿಸಿದ್ದು ದುರಂತದ ಸಂಗತಿ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಹಿರಿಯ ದಲಿತ ಮುಖಂಡ ಗುರುಶಾಂತ ಪಟ್ಟೇದಾರ ಹೇಳಿದರು.
Vijaya Karnataka Web support for english medium school
ಇಂಗ್ಲಿಷ್‌ ಮಾದ್ಯಮ ಶಾಲೆಗೆ ಬೆಂಬಲ


ಮಂಗಳವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಹುತೇಕ ಜನ ತಮ್ಮ ಮಕ್ಕಳನ್ನು ಇಂಗ್ಲಿಷ್‌ ಮಾಧ್ಯಮದಲ್ಲಿ ಕಲಿಸುವ ಇಚ್ಛೆ ಹೊಂದಿದ್ದಾರೆ. ಆದರೆ, ಇದಕ್ಕೆ ಸಾಹಿತಿ ಚಂದ್ರಶೇಖರ ಕಂಬಾರ, ಕಸಾಪ ಅಧ್ಯಕ್ಷ ಮನು ಬಳಿಗಾರ ವಿರೋಧ ವ್ಯಕ್ತಪಡಿಸಿದ್ದು ದುರದೃಷ್ಟಕರ. ಇಂಗ್ಲಿಷ್‌ ಮಾಧ್ಯಮ ಶಿಕ್ಷ ಣದಿಂದ ದಲಿತರು, ಹಿಂದುಳಿದವರು ಏಳ್ಗೆ ಹೊಂದಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಇಂಗ್ಲಿಷ್‌ ಭಾಷೆಯ ಸಮಸ್ಯೆಯಿಂದಲೇ ನಮ್ಮ ಯುವಕರು ಉದ್ಯೋಗಗಳಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸಾಹಿತಿ ಎನಿಸಿಕೊಂಡವರು ಸಮಾಜಕ್ಕೆ ಅವಶ್ಯವಾದ ನಿರುದ್ಯೋಗ, ಬೆಲೆ ಏರಿಕೆ, ಮೂಢನಂಬಿಕೆಗಳ ಬಗ್ಗೆ ಮಾತನಾಡದೇ ಕಾಲಹರಣ ಮಾಡಲು ಸಾಹಿತ್ಯ ಸಮ್ಮೇಳನದಲ್ಲಿ ಇಲ್ಲಸಲ್ಲದ ಮಾತುಗಳನ್ನಾಡುತ್ತಿದ್ದಾರೆ. ಆದ್ದರಿಂದ ಸಾಹಿತ್ಯ ಸಮ್ಮೇಳನವನ್ನು ವಿರೋಧಿಸುತ್ತೇನೆ ಎಂದು ಹೇಳಿದರು.

ಮುಖಂಡರಾದ ಸಂತೋಷ ಅಂಕಲಗಿ, ಶಿವುಕುಮಾರ ಮದರಿ, ಶ್ರೀಮಂತ ಕೋಟ್ರೆ, ಮಕಬುಲ್‌ ಖಾನ್‌, ಎನ್‌.ಕೆ.ಹೋಳ್ಕರ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ