ಆ್ಯಪ್ನಗರ

ಲಾರಿ ಅಡಿ ಸಿಲುಕಿ ಬಾಲಕ ಸಾವು

ತಾಯಿ ಜೊತೆಯಲ್ಲಿ ನಡೆದುಕೊಂಡು ಹೊರಟಿದ್ದ ಬಾಲಕನ ಮೇಲೆ ಲಾರಿ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಲ್ಲಿನ ಸೇಡಂ ರಸ್ತೆಯ ಖರ್ಗೆ ಪೆಟ್ರೋಲ್‌ ಸಮೀಪದ ಸಿಗ್ನಲ್‌ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

Vijaya Karnataka 2 Feb 2019, 9:41 pm
ಕಲಬುರಗಿ:ತಾಯಿ ಜೊತೆಯಲ್ಲಿ ನಡೆದುಕೊಂಡು ಹೊರಟಿದ್ದ ಬಾಲಕನ ಮೇಲೆ ಲಾರಿ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಲ್ಲಿನ ಸೇಡಂ ರಸ್ತೆಯ ಖರ್ಗೆ ಪೆಟ್ರೋಲ್‌ ಸಮೀಪದ ಸಿಗ್ನಲ್‌ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
Vijaya Karnataka Web the boy died of a lorry
ಲಾರಿ ಅಡಿ ಸಿಲುಕಿ ಬಾಲಕ ಸಾವು


ಮೂಲತಃ ಕಮಲಾಪುರ ಪಟ್ಟಣದ ಓಂಕಾರ್‌ ಪವಾರ್‌ ಅವರ ಪುತ್ರ ವಿರಾಟ್‌ (5) ಮೃತಪಟ್ಟ ಬಾಲಕ. ಇವರು ಪ್ರಸ್ತುತ ಸೇಡಂ ರಸ್ತೆಯ ತಿಲಕ್‌ ನಗರದ ನಿವಾಸಿಗಳು. ಸಂಜೆ ತಾಯಿ ಜೊತೆಗೆ ಊರಿನಿಂದ ಬಂದು ಬಸ್‌ ಇಳಿದಿದ್ದಾರೆ. ಈ ವೇಳೆ ರಸ್ತೆ ದಾಟುತ್ತಿದ್ದಾಗ ಗುಲ್ಬರ್ಗ ವಿಶ್ವವಿದ್ಯಾಲಯ ಕಡೆಯಿಂದ ಬಂದ ಲಾರಿ ಬಾಲಕನ ಮೇಲೆ ಹರಿದಿದೆ. ಘಟನೆ ಸಂಭವಿಸುತ್ತಿದ್ದಂತೆಯೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಕುರಿತು ಎಂ.ಬಿ.ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ