ಆ್ಯಪ್ನಗರ

ಎಂಎಲ್ಸಿಯಾಗಿ ತಿಪ್ಪಣ್ಣಪ್ಪ ಕಮಕನೂರ್‌ ನೇಮಕ

ವಿ.ಎಸ್‌.ಉಗ್ರಪ್ಪ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ತಿನ ಸ್ಥಾನಕ್ಕೆ ರಾಜ್ಯ ಕೋಲಿ ಗಂಗಾಮತ ಸಮಾಜದ ಗೌರವಾಧ್ಯಕ್ಷ ತಿಪ್ಪಣ್ಣ ಕಮಕನೂರ್‌ ಅವರನ್ನು ನೇಮಿಸಲಾಗಿದೆ. ಇವರ ಅವಧಿ 2020ನೇ ಸಾಲಿನ ಜೂನ್‌ವರೆಗೆ ಇರುತ್ತದೆ.

Vijaya Karnataka 30 May 2019, 9:58 pm
ಬೆಂಗಳೂರು/ ಕಲಬುರಗಿ :ವಿ.ಎಸ್‌.ಉಗ್ರಪ್ಪ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ತಿನ ಸ್ಥಾನಕ್ಕೆ ರಾಜ್ಯ ಕೋಲಿ ಗಂಗಾಮತ ಸಮಾಜದ ಗೌರವಾಧ್ಯಕ್ಷ ತಿಪ್ಪಣ್ಣ ಕಮಕನೂರ್‌ ಅವರನ್ನು ನೇಮಿಸಲಾಗಿದೆ. ಇವರ ಅವಧಿ 2020ನೇ ಸಾಲಿನ ಜೂನ್‌ವರೆಗೆ ಇರುತ್ತದೆ.
ಬಳ್ಳಾರಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಉಗ್ರಪ್ಪ ಅವರು ವಿಧಾನ ಪರಿಷತ್ತಿನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈಗ ಆ ಸ್ಥಾನದ ಉಳಿದ ಅವಧಿಗೆ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾದ ತಿಪ್ಪಣ್ಣಪ್ಪ ಕಮಕನೂರ್‌ ಅವರನ್ನು ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ತಿಪ್ಪಣ್ಣಪ್ಪ ಅವರು ಕೃತಜ್ಞತೆ ಸಲ್ಲಿಸಿದರು. ವಿಧಾನ ಪರಿಷತ್ತಿನ ಸದಸ್ಯರಾದ ಯು.ಬಿ.ವೆಂಕಟೇಶ್‌ ಹಾಗೂ ಕೆ.ಸಿ.ಕೊಂಡಯ್ಯ ಅವರು ಉಪಸ್ಥಿತರಿದ್ದರು.
Vijaya Karnataka Web thippappanna kamakanur appointed as mlc
ಎಂಎಲ್ಸಿಯಾಗಿ ತಿಪ್ಪಣ್ಣಪ್ಪ ಕಮಕನೂರ್‌ ನೇಮಕ


ಲೋಕಸಭಾ ಚುನಾವಣೆಗೂ ಮುನ್ನವೇ ಈ ನೇಮಕವಾಗಿತ್ತಾದರೂ ನೀತಿ ಸಂಹಿತೆ ಜಾರಿಯಾಗಿದ್ದರಿಂದ ನೇಮಕಾತಿ ವಿಳಂಬವಾಗಿತ್ತು. ಕೋಲಿ ಸಮುದಾಯದಲ್ಲಿ ಹೊಸ ಸಂತಸ ಮೂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ