ಆ್ಯಪ್ನಗರ

ದಿಢೀರ್‌ ಬೆಳವಣಿಗೆಯಲ್ಲಿ ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್‌ನ ಮೂವರು ನಿರ್ದೇಶಕರು ಅನರ್ಹ; ಚುನಾವಣೆ ಅತಂತ್ರ

ಮೂವರು ನಿರ್ದೇಶಕರಿಗೆ ಮತದಾನ ಮಾಡುವ ಹಕ್ಕಿಲ್ಲ ಎಂದು ಸಹಕಾರ ಸಂಘಗಳ ಜಂಟಿ ನಿಬಂಧಕರು ಹೇಳಿದ್ದು, ಶುಕ್ರವಾರ ನಡೆಯಬೇಕಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆಯುವುದು ಅನುಮಾನವಾಗಿದೆ.

Vijaya Karnataka 8 Jan 2021, 1:14 pm
ಕಲಬುರಗಿ: ಇಲ್ಲಿನ ಕಲಬುರಗಿ-ಯಾದಗಿರಿ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ ಕುತೂಹಲಕ್ಕೆ ತಿರುಗಿದ್ದು ಮೂವರು ನಿರ್ದೇಶಕರನ್ನು ಅನರ್ಹಗೊಳಿಸಲಾಗಿದೆ.
Vijaya Karnataka Web ELECTION


ನವಂಬರ್ 25 ರಂದು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು. ಆದರೆ ಇದುವರೆಗೆ ನಿರ್ದೇಶಕರಿಗೆ ಆದೇಶ ಪ್ರತಿ ತಲುಪದೆ ಇರುವುದರಿಂದ ಇಂದು ಮತದಾನ ಮಾಡಲು ಆಗಮಿಸಿದ್ದಾಗ ವಿಷಯ ಬಹಿರಂಗಗೊಂಡಿದೆ.

ಹೀಗಾಗಿ ಸಹಕಾರ ಸಂಘಗಳ ಜಂಟಿ ನಿಬಂಧಕರು ಚುನಾವಣೆಯಲ್ಲಿ ಈ ನಿರ್ದೇಶಕರಿಗೆ ಮತದಾನ ಮಾಡುವ ಹಕ್ಕಿಲ್ಲ ಎಂದು ಹೇಳುವ ಮೂಲಕ ಶುಕ್ರವಾರ ನಡೆಯಬೇಕಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆಯುವುದು ಅನುಮಾನವಾಗಿದೆ.

ಇದರಿಂದ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರ ಕನಸಿಗೆ ಮೊದಲ ವಿಘ್ನ ಎದುರಾಗಿದೆ. ಎರಡು ದಿನಗಳ ಹಿಂದೆಯಷ್ಟೆ ಅವರು ಬ್ಯಾಂಕಿಗೆ ನಾಮ ನಿರ್ದೇಶನಗೊಂಡಿದ್ದರು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ತೆಲ್ಕೂರ ಅವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಸುರೇಶ ಸಜ್ಜ‌ನ ನಾಮಪತ್ರ ಸಲ್ಲಿಸಿದ್ದಾರೆ.

ಕಲಬುರಗಿ: ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದಲ್ಲಿ ಒಂದು ಮತದಿಂದ ಗೆದ್ದವರು

ಪ್ರಸ್ತುತ ಏಳು ಜನ ನಿರ್ದೇಶಕರು ಬ್ಯಾಂಕ್ ಆವರಣಕ್ಕೆ ಬಂದಿದ್ದು, ಇನ್ನೂ ‌ಇಬ್ಬರು ನಿರ್ದೇಶಕರು ಬಂದರೆ ಚುನಾವಣೆ ನಡೆಯಲಿದೆ. ಇಲ್ಲದಿದ್ದರೆ ಮುಂದೂಡುವುದು ಅನಿವಾರ್ಯ ಎಂದು ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ನಿಂಬಾಳ ತಿಳಿಸಿದರು.

ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಾದ ಸೋಮಶೇಖರ ಗೋನಾಯಕ, ಗೌತಮ ಪಾಟೀಲ, ಬಾಪುಗೌಡ ಪಾಟೀಲ ಅವರನ್ನು ಸಹಕಾರ ಸಂಘಗಳ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ