ಆ್ಯಪ್ನಗರ

ಕ್ಷಯ ಪತ್ತೆ ಚಿಕಿತ್ಸೆ ಆಂದೋಲನ 25ರಿಂದ

ರಾಷ್ಟ್ರೀಯ ಕುಷ್ಠರೋಗ ನಿಯಂತ್ರಣದ ಪರಿಷ್ಕೃತ ಕಾರ್ಯಕ್ರಮದ ಅಂಗವಾಗಿ ರಾಜ್ಯದ ಎಲ್ಲಜಿಲ್ಲೆಗಳಲ್ಲಿನವೆಂಬರ್‌ 25 ರಿಂದ ಡಿಸೆಂಬರ್‌ 10ರ ವರೆಗೆ ಎರಡನೇ ಹಂತದ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಹೇಳಿದರು.

Vijaya Karnataka 19 Nov 2019, 5:00 am
ಕಲಬುರಗಿ:ರಾಷ್ಟ್ರೀಯ ಕುಷ್ಠರೋಗ ನಿಯಂತ್ರಣದ ಪರಿಷ್ಕೃತ ಕಾರ್ಯಕ್ರಮದ ಅಂಗವಾಗಿ ರಾಜ್ಯದ ಎಲ್ಲಜಿಲ್ಲೆಗಳಲ್ಲಿನವೆಂಬರ್‌ 25 ರಿಂದ ಡಿಸೆಂಬರ್‌ 10ರ ವರೆಗೆ ಎರಡನೇ ಹಂತದ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಹೇಳಿದರು.
Vijaya Karnataka Web DC glb


ಸೋಮವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನದ ಕುರಿತು ಜರುಗಿದ ಸಭೆಯಲ್ಲಿಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಕ್ಷಯರೋಗ ಕೇಂದ್ರದಿಂದ ಜಿಲ್ಲೆಯಲ್ಲಿಯೂ ಈ ಆಂದೋಲನ ಹಮ್ಮಿಕೊಂಡಿದ್ದು, 'ರೋಗವನ್ನು ದೂರವಿರಿಸಿ, ರೋಗಿಯನ್ನಲ್ಲ' ಎಂಬುದು ಕಾರ್ಯಕ್ರಮದ ಘೋಷ್ಯವಾಕ್ಯವಾಗಿದೆ ಎಂದರು.

ಎರಡು ವಾರ ಅಥವಾ ಹೆಚ್ಚಿನ ಅವಧಿಗೆ ಕೆಮ್ಮು ಇದ್ದರೆ, ಕೆಮ್ಮುವ ವೇಳೆ ಕಫದ ಜೊತೆಗೆ ರಕ್ತ ಕಾಣಿಸಿದರೆ, ರಾತ್ರಿ ವೇಳೆ ಜ್ವರ ಬರುವುದು, ತೂಕದ ಇಳಿಕೆ, ರಾತ್ರಿ ವೇಳೆ ಬೆವರುವುದು ಹಾಗೂ ಹಸಿವಾಗದಿರುವುದು ಕ್ಷಯ ರೋಗದ ಸಾಮಾನ್ಯ ಲಕ್ಷಣವಾಗಿದೆ. ಇಂತಹ ಲಕ್ಷಣಗಳು ಕಂಡುಬಂದಲ್ಲಿತಕ್ಕಣವೇ ಹತ್ತಿರದ ಸಕಾರಿ ಆಸ್ಪತ್ರೆಯಲ್ಲಿಸೂಕ್ತ ಚಿಕಿತ್ಸೆ ಪಡೆಯಬೇಕು. ಕ್ಷಯರೋಗಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲ, ಪ್ರಶ್ನೆಗಳಿದ್ದರೆ ಉಚಿತ ಸಹಾಯವಾಣಿ ಸಂಖ್ಯೆ 104ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದರು.

ಕ್ಷಯರೋಗದ ಆಂದೋಲನದ ಕುರಿತು ಅರಿವು ಮೂಡಿಸಲು ಸಿದ್ಧಪಡಿಸಿರುವ ಬ್ಯಾನರ್‌ ಮತ್ತು ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು. ಜಿಪಂ ಸಿಇಒ ಡಾ.ಪಿ.ರಾಜಾ, ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ, ಜಿಲ್ಲಾಆರ್‌.ಸಿ.ಹೆಚ್‌ ಅಧಿಕಾರಿ ಡಾ. ಪ್ರಭುಲಿಂಗ ಆರ್‌. ಮಾನಕರ್‌, ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು, ಸಿಡಿಪಿಓಗಳು ಸೇರಿದಂತೆ ವಿವಿಧ ಇಲಾಖೆಗಳ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ