ಆ್ಯಪ್ನಗರ

ಹಸ್ತಕ್ಷೇಪ ಮಾಡುತ್ತಿಲ್ಲ, ಆಡಳಿತದಲ್ಲಿ ಯಡಿಯೂರಪ್ಪ ನನ್ನ ಮೇಲೆ ಡಿಪೆಂಡ್‌ ಆಗಬೇಕಾದ ಅಗತ್ಯ ಇಲ್ಲ: ವಿಜಯೇಂದ್ರ

ನಾಲ್ಕು ದಶಕಗಳಿಂದ ರಾಜಕೀಯ ಕರಗತ ಮಾಡಿಕೊಂಡಿರುವ ಹಾಗೂ ಆಡಳಿತದಲ್ಲಿ ಅಪಾರ ಅನುಭವ ಹೊಂದಿರುವ ಯಡಿಯೂರಪ್ಪ ಅವರಿಗೆ ಯಾರೂ ಏನೂ ಹೇಳಿಕೊಡಬೇಕಾದ ಅಗತ್ಯವಿಲ್ಲ. ನನ್ನ ಮೇಲೆ ಡಿಪೆಂಡ್‌ ಆಗಿ ಆಡಳಿತ ನಡೆಸುವ ಅಗತ್ಯವಿಲ್ಲ

Vijaya Karnataka Web 21 Jan 2021, 3:42 pm
ಕಲಬುರಗಿ: ಖಾತೆ ಬದಲಾವಣೆಯಿಂದ ಉಂಟಾದ ಅಸಮಾಧಾನ ಸದ್ಯದಲ್ಲೇ ಶಮನ ಆಗುತ್ತದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲವನ್ನೂ ಪರಿಹರಿಸಲಿದ್ದಾರೆ.
Vijaya Karnataka Web ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ


ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿದರು.

ಅಸಮಾಧಾನಗೊಂಡವರೊಂದಿಗೆ ಸಿಎಂ ಯಡಿಯೂರಪ್ಪ ಮಾತನಾಡಿ ಸಮಸ್ಯೆ ಬಗೆಹರಿಸಲಿದ್ದಾರೆ. ಖಾತೆ ಹಂಚಿಕೆಯಲ್ಲಿ ವಿಜಯೇಂದ್ರ ಪಾತ್ರ ಎನ್ನುವ ಆರೋಪಗಳೆಲ್ಲಾ ಶುದ್ಧ ಸುಳ್ಳು ಎಂದರು.

ಯಡಿಯೂರಪ್ಪ ಅವರು ನಾಲ್ಕು ದಶಕಗಳ ಹೋರಾಟದ ಮೂಲಕ ಸಿಎಂ ಆದವರು, ಡಿಸಿಎಂ ಆಗಿ, ಸಿಎಂ ಆಗಿ ಅಪಾರ ರಾಜಕೀಯ ಅನುಭವ ಹೊಂದಿದ್ದಾರೆ. ಅವರಿಗೆ ಯಾರ ಹಸ್ತಕ್ಷೇಪದ ಅಗತ್ಯವೂ ಬೀಳುವುದಿಲ್ಲ. ನನ್ನ ಹಸ್ತಕ್ಷೇಪವಂತೂ ಇಲ್ಲವೇ ಇಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ನಾಲ್ಕು ದಶಕಗಳಿಂದ ರಾಜಕೀಯ ಕರಗತ ಮಾಡಿಕೊಂಡಿರುವ ಹಾಗೂ ಆಡಳಿತದಲ್ಲಿ ಅಪಾರ ಅನುಭವ ಹೊಂದಿರುವ ಯಡಿಯೂರಪ್ಪ ಅವರಿಗೆ ಯಾರೂ ಏನೂ ಹೇಳಿಕೊಡಬೇಕಾದ ಅಗತ್ಯವಿಲ್ಲ. ನನ್ನ ಮೇಲೆ ಡಿಪೆಂಡ್‌ ಆಗಿ ಆಡಳಿತ ನಡೆಸುವ ಅಗತ್ಯವಿಲ್ಲ ಎಂದು ಹೇಳಿದರು.

ಯಾರೇ ಆಗಲಿ ಅಸಮಾಧಾನಗೊಂಡಿದ್ದರೂ ಅವರನ್ನು ಕರೆದು ಯಡಿಯೂರಪ್ಪ ಅವರು ಮಾತನಾಡಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ