ಆ್ಯಪ್ನಗರ

ಸಾಧಕ ರೈತರಿಗೆ ವಿಕ ಪುರಸ್ಕಾರ ನಾಳೆ

ಕೃಷಿಯಲ್ಲಿ ಅನನ್ಯ ಸಾಧನೆ ಮಾಡಿದ ಅನ್ನದಾತರನ್ನು ಗುರುತಿಸಿ ಗೌರವಿಸುತ್ತಿರುವ ವಿಜಯ ಕರ್ನಾಟಕದ ವಿಕ ಸೂಪರ್‌ ಸ್ಟಾರ್‌ ರೈತ ಪುರಸ್ಕಾರ ಕಾರ್ಯಕ್ರಮ ಜನವರಿ 7ರಂದು ಬೆಳಗ್ಗೆ 11ಕ್ಕೆ ಕಲಬುರಗಿಯ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದ ಬಳಿಯ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಭವನದಲ್ಲಿ ಜರುಗಲಿದೆ.

Vijaya Karnataka 6 Jan 2019, 5:00 am
ಕಲಬುರಗಿ :ಕೃಷಿಯಲ್ಲಿ ಅನನ್ಯ ಸಾಧನೆ ಮಾಡಿದ ಅನ್ನದಾತರನ್ನು ಗುರುತಿಸಿ ಗೌರವಿಸುತ್ತಿರುವ ವಿಜಯ ಕರ್ನಾಟಕದ ವಿಕ ಸೂಪರ್‌ ಸ್ಟಾರ್‌ ರೈತ ಪುರಸ್ಕಾರ ಕಾರ್ಯಕ್ರಮ ಜನವರಿ 7ರಂದು ಬೆಳಗ್ಗೆ 11ಕ್ಕೆ ಕಲಬುರಗಿಯ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದ ಬಳಿಯ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಭವನದಲ್ಲಿ ಜರುಗಲಿದೆ.
Vijaya Karnataka Web vk reception tomorrow the farmers
ಸಾಧಕ ರೈತರಿಗೆ ವಿಕ ಪುರಸ್ಕಾರ ನಾಳೆ


ಮುತ್ಯಾನ ಬಬಲಾದ್‌ ಶ್ರೀಗುರು ಚನ್ನವೀರೇಶ್ವರ ವಿರಕ್ತ ಮಠದ ಪೀಠಾಧಿಪತಿಯೂ ಆಗಿರುವ ಕೃಷಿ ಋುಷಿ ಎಂದೇ ಕರೆಯಲಾಗುವ ಗುರುಪಾದಲಿಂಗ ಶಿವಯೋಗಿಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಾ. ಸಿದ್ರಾಮಪ್ಪ ಪಾಟೀಲ್‌ ಧಂಗಾಪುರ ಅಧ್ಯಕ್ಷತೆ ವಹಿಸಲಿದ್ದು, ಶಾಸಕರಾದ ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ್‌, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ, ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಸಾಧಕ ರೈತರಿಗೆ ವಿಕ ಪುರಸ್ಕಾರ ಕಾರ್ಯಕ್ರಮ ರಾಜ್ಯವ್ಯಾಪಿಯಾಗಿ ನಡೆಯುತ್ತಿದ್ದು, ಕಲಬುರಗಿ, ಬೀದರ್‌ ಮತ್ತು ಯಾದಗಿರಿ ಜಿಲ್ಲೆಯ ಸಾಧಕ ರೈತರನ್ನೂ ಗುರುತಿಸಿ ಪುರಸ್ಕಾರ ನೀಡಲಾಗುತ್ತಿದೆ. ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ