ಆ್ಯಪ್ನಗರ

ಉಡಾಫೆ ಹೇಳಿಕೆ ನೀಡಬೇಡಿ, ಕೈ ಶಾಸಕರಿಗೆ ಗುಂಡೂರಾವ್‌ ತಾಕೀತು

ಕಾಂಗ್ರೆಸ್‌ ಶಾಸಕರು ಉಡಾಫೆ ಹೇಳಿಕೆ ನೀಡಿದರೆ ಮುಲಾಜಿಲ್ಲದೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಖಡಕ್‌ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

Vijaya Karnataka Web 21 Sep 2018, 4:00 am
ಬೆಂಗಳೂರು : ಕಾಂಗ್ರೆಸ್‌ ಶಾಸಕರು ಉಡಾಫೆ ಹೇಳಿಕೆ ನೀಡಿದರೆ ಮುಲಾಜಿಲ್ಲದೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಖಡಕ್‌ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
Vijaya Karnataka Web
ಉಡಾಫೆ ಹೇಳಿಕೆ ನೀಡಬೇಡಿ, ಕೈ ಶಾಸಕರಿಗೆ ಗುಂಡೂರಾವ್‌ ತಾಕೀತು


ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, ಪಕ್ಷ ಹಾಗೂ ಸರಕಾರದ ವರ್ಚಸ್ಸಿಗೆ ಧಕ್ಕೆ ತರುವ ಹೇಳಿಕೆಯನ್ನು ಯಾರೂ ನೀಡಬಾರದು. ಬಿಜೆಪಿಯವರು ಹವಾಲ ಹಣ ಬಳಸಿ ಸರಕಾರ ಕೆಡವಲು ಯತ್ನಿಸುತ್ತಿದ್ದಾರೆ. ಅವರಿಗೆ ಸಹಾಯವಾಗುವಂತೆ ನಡೆದುಕೊಳ್ಳಬಾರದು ಎಂದು ತಾಕೀತು ಮಾಡಿದ್ದಾರೆ.

ಕಾಂಗ್ರೆಸ್‌ನ ಯಾವ ಶಾಸಕರೂ ಪಕ್ಷ ಬಿಡುವ ಮಾತಾಡಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಸತ್ಯಕ್ಕೆ ದೂರವಾದ ವರದಿ ಬರುತ್ತಿದೆ. ಅಂತಹ ಮಾಧ್ಯಮಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಕಾಂಗ್ರೆಸ್‌ ಶಾಸಕರು ಮುಂಬಯಿ ಸೇರಿದಂತೆ ಎಲ್ಲಿಗೂ ಹೋಗಿಲ್ಲ. ಕೆಲವರು ವೈಯಕ್ತಿಕ ಕೆಲಸದ ಮೇಲೆ ಬೇರೆಡೆ ಹೋಗಿರಬಹುದು. ಅದನ್ನೇ ಆಧಾರವಾಗಿಟ್ಟುಕೊಂಡು ಪಕ್ಷ ಬಿಡುತ್ತಿದ್ದಾರೆ ಎಂದು ಬಿಂಬಿಸಬಾರದು ಎಂದರು.

ದಂಗೆ ವಿಚಾರವಾಗಿ ಸಿಎಂ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಭಾವನಾತ್ಮಕವಾಗಿ ಸಿಎಂ ಹಾಗೆ ಹೇಳಿರಬಹುದು. ಇದನ್ನು ಹೆಚ್ಚು ಬೆಳೆಸುವುದು ಬೇಡ. ಅವರಿಗೆ ಬಿಜೆಪಿಯವರು ಸಾಕಷ್ಟು ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದರು.

ಅಕ್ಟೋಬರ್‌ 3 ರಂದು ಸಿಎಲ್‌ಪಿ
ವಿಧಾನ ಪರಿಷತ್‌ ಉಪ ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್‌ 3 ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆಯಲಿದೆ. ಪರಿಷತ್‌ ಚುನಾವಣೆ ಅಭ್ಯರ್ಥಿಗಳ ಹೆಸರು ಒಂದೆರಡು ದಿನದಲ್ಲಿ ಪ್ರಕಟವಾಗಲಿದೆ. ಅಕ್ಟೋಬರ್‌ ಮೊದಲ ವಾರ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ