ಆ್ಯಪ್ನಗರ

ದೇಗುಲ ಸುತ್ತುವುದರಲ್ಲೇ ಕಾಲಹರಣ: ಶೆಟ್ಟರ್‌

ಮುಖ್ಯಮಂತ್ರಿ ಕುಮಾರಸ್ವಾಮಿ ಕಚೇರಿಯಲ್ಲಿ ಕುಳಿತು ಆಡಳಿತ ನಡೆಸುವುದನ್ನು ಬಿಟ್ಟು ದೇವಸ್ಥಾನಗಳನ್ನು ಸುತ್ತುವುದರಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ. ಇದರಿಂದ ಸಿಎಂಗೆ ಆಡಳಿತದಲ್ಲಿ ಹಿಡಿತ ಸಾಧಿಸಲಾಗದೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಆಡಳಿತ ಸಂಪೂರ್ಣ ಕುಸಿಯುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಆರೋಪಿಸಿದರು.

Vijaya Karnataka Web 23 Sep 2018, 4:00 am
ಹುಬ್ಬಳ್ಳಿ: ಮುಖ್ಯಮಂತ್ರಿ ಕುಮಾರಸ್ವಾಮಿ ಕಚೇರಿಯಲ್ಲಿ ಕುಳಿತು ಆಡಳಿತ ನಡೆಸುವುದನ್ನು ಬಿಟ್ಟು ದೇವಸ್ಥಾನಗಳನ್ನು ಸುತ್ತುವುದರಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ. ಇದರಿಂದ ಸಿಎಂಗೆ ಆಡಳಿತದಲ್ಲಿ ಹಿಡಿತ ಸಾಧಿಸಲಾಗದೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಆಡಳಿತ ಸಂಪೂರ್ಣ ಕುಸಿಯುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಆರೋಪಿಸಿದರು.
Vijaya Karnataka Web
ದೇಗುಲ ಸುತ್ತುವುದರಲ್ಲೇ ಕಾಲಹರಣ: ಶೆಟ್ಟರ್‌


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮುಖ್ಯಮಂತ್ರಿ ದೇವಸ್ಥಾನಗಳಿಗೆ ಹೋಗುವುದನ್ನು ತಪ್ಪು ಅನ್ನುವುದಿಲ್ಲ. ರಾಜ್ಯದ ಜನ ಬರ ಹಾಗೂ ಪ್ರವಾಹದಂತಹ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಎಲ್ಲ ಕೆಲಸಗಳನ್ನು ಬಿಟ್ಟು ಕೇವಲ ದೇವಸ್ಥಾನಕ್ಕೆ ಹೋಗುವುದೇ ಕೆಲಸ ಮಾಡಿಕೊಂಡಿದ್ದಾರೆ'' ಎಂದು ದೂರಿದರು.

''ನನ್ನನ್ನು ಸಿಎಂ ಮಾಡಿದ್ದು ಜನರಲ್ಲ, ದೇವರು ಎನ್ನುತ್ತಿದ್ದಾರೆ. ಎಲ್ಲವನ್ನು ದೇವರೇ ಮಾಡುವುದಾದರೇ ಸಿಎಂ ಏಕೆ ಬೇಕು ಎನ್ನುವ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ. ಜನ ಸರಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ತಿರುಗಿ ಬೀಳುವ ಮುನ್ನ ಎಚ್ಚೆತ್ತುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಿದೆ. ದೇಗುಲ ಭೇಟಿಯಲ್ಲಿಯೂ ಉತ್ತರ ಕರ್ನಾಟಕದ ಬಗ್ಗೆ ತಾರತಮ್ಯ ಮಾಡುತ್ತಿದ್ದಾರೆ. ಈ ಭಾಗದ ದೇವಸ್ಥಾನಗಳಿಗೆ ಭೇಟಿ ನೀಡಿದರೆ ಇಲ್ಲಿನ ಬರದ ನೈಜ ಸ್ಥಿತಿಯಾದರೂ ಮುಖ್ಯಮಂತ್ರಿ ಗಮನಕ್ಕೆ ಬರುತ್ತಿತ್ತು'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ