ಬೆಂಗಳೂರು : ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಬಿ.ಕೆ.ಪವಿತ್ರ ಪ್ರಕರಣದ ಅನುಷ್ಠಾನದಿಂದ ಹಿಂಬಡ್ತಿ ಹೊಂದಿದ್ದ ಒಟ್ಟು 43 ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು, ಇತ್ತೀಚೆಗೆ ಬಂದ ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಮರು ನಿಯುಕ್ತಿಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ಬಿ.ಕೆ.ಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ 2017ರ ಫೆ.9ರಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ಅನ್ವಯ, ಶಿಕ್ಷಣ ಇಲಾಖೆಯಲ್ಲಿ ಮೂವರನ್ನು ಅಧೀಕ್ಷಕ ಹುದ್ದೆಗೆ, 13 ಮಂದಿಯನ್ನು ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಹಾಗೂ 27 ಮಂದಿಯನ್ನು ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಹಿಂಬಡ್ತಿಗೊಳಿಸಲಾಗಿತ್ತು.
ಆ ನಂತರ, ರಾಜ್ಯ ಸರಕಾರ ಜಾರಿಗೆ ತಂದಿದ್ದ ಬಡ್ತಿ ಮೀಸಲಾತಿ ತಿದ್ದುಪಡಿ ಕಾಯಿದೆಯನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ ಎತ್ತಿ ಹಿಡಿದಿತ್ತು. ಇದರ ಅನ್ವಯ ಹಿಂಬಡ್ತಿ ಹೊಂದಿದ್ದ ನೌಕರರು ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಹುದ್ದೆಯಲ್ಲಿ, ಹಿಂಬಡ್ತಿ ಹೊಂದಿದ ದಿನಾಂಕದಿಂದ ಪೂರ್ವಾನ್ವಯವಾಗಿ ಮರು ಸ್ಥಳನಿಯುಕ್ತಿಗೊಳಿಸುವಂತೆ ಆದೇಶಿಸಿತ್ತು. ಹಾಗೂ, ಒಂದು ವೇಳೆ ಆ ವೃಂದಗಳಲ್ಲಿ ಹುದ್ದೆಗಳ ಲಭ್ಯವಿಲ್ಲದಿದ್ದಲ್ಲಿ, ಹೊಸ ಹುದ್ದೆಗಳನ್ನು ಸೃಜಿಸತಕ್ಕದ್ದು ಎಂದು ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಹಿಂಬಡ್ತಿ ಪಡೆದಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮರು ಸ್ಥಳ ನಿಯುಕ್ತಿಗೊಳಿಸಲು ಮುಂದಾಗಿರುವ ಶಿಕ್ಷಣ ಇಲಾಖೆ, ಮೇ 21ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ನಗರದ ನೃಪತುಂಗ ರಸ್ತೆಯಲ್ಲಿರುವ ಸರ್ವ ಶಿಕ್ಷಣ ಅಭಿಯಾನದ ಕಚೇರಿಯಲ್ಲಿ ಕೌನ್ಸೆಲಿಂಗ್ ಹಮ್ಮಿಕೊಂಡಿದೆ.
ಬಿ.ಕೆ.ಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ 2017ರ ಫೆ.9ರಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ಅನ್ವಯ, ಶಿಕ್ಷಣ ಇಲಾಖೆಯಲ್ಲಿ ಮೂವರನ್ನು ಅಧೀಕ್ಷಕ ಹುದ್ದೆಗೆ, 13 ಮಂದಿಯನ್ನು ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಹಾಗೂ 27 ಮಂದಿಯನ್ನು ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಹಿಂಬಡ್ತಿಗೊಳಿಸಲಾಗಿತ್ತು.
ಆ ನಂತರ, ರಾಜ್ಯ ಸರಕಾರ ಜಾರಿಗೆ ತಂದಿದ್ದ ಬಡ್ತಿ ಮೀಸಲಾತಿ ತಿದ್ದುಪಡಿ ಕಾಯಿದೆಯನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ ಎತ್ತಿ ಹಿಡಿದಿತ್ತು. ಇದರ ಅನ್ವಯ ಹಿಂಬಡ್ತಿ ಹೊಂದಿದ್ದ ನೌಕರರು ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಹುದ್ದೆಯಲ್ಲಿ, ಹಿಂಬಡ್ತಿ ಹೊಂದಿದ ದಿನಾಂಕದಿಂದ ಪೂರ್ವಾನ್ವಯವಾಗಿ ಮರು ಸ್ಥಳನಿಯುಕ್ತಿಗೊಳಿಸುವಂತೆ ಆದೇಶಿಸಿತ್ತು. ಹಾಗೂ, ಒಂದು ವೇಳೆ ಆ ವೃಂದಗಳಲ್ಲಿ ಹುದ್ದೆಗಳ ಲಭ್ಯವಿಲ್ಲದಿದ್ದಲ್ಲಿ, ಹೊಸ ಹುದ್ದೆಗಳನ್ನು ಸೃಜಿಸತಕ್ಕದ್ದು ಎಂದು ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಹಿಂಬಡ್ತಿ ಪಡೆದಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮರು ಸ್ಥಳ ನಿಯುಕ್ತಿಗೊಳಿಸಲು ಮುಂದಾಗಿರುವ ಶಿಕ್ಷಣ ಇಲಾಖೆ, ಮೇ 21ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ನಗರದ ನೃಪತುಂಗ ರಸ್ತೆಯಲ್ಲಿರುವ ಸರ್ವ ಶಿಕ್ಷಣ ಅಭಿಯಾನದ ಕಚೇರಿಯಲ್ಲಿ ಕೌನ್ಸೆಲಿಂಗ್ ಹಮ್ಮಿಕೊಂಡಿದೆ.