Please enable javascript.ವಾಯುಭಾರ ಕುಸಿತ, ರಾಜ್ಯದ ಹಲವೆಡೆ ಮಳೆ - ವಾಯುಭಾರ ಕುಸಿತ, ರಾಜ್ಯದ ಹಲವೆಡೆ ಮಳೆ - Vijay Karnataka

ವಾಯುಭಾರ ಕುಸಿತ, ರಾಜ್ಯದ ಹಲವೆಡೆ ಮಳೆ

ವಿಕ ಸುದ್ದಿಲೋಕ 22 Oct 2013, 4:03 am
Subscribe

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕಳೆದೆರಡು ದಿನಗಳಿಂದ ರಾಜ್ಯದ ಅನೇಕ ಭಾಗಗಳಲ್ಲಿ ಸುರಿಯುತ್ತಿದೆ.

ವಾಯುಭಾರ ಕುಸಿತ, ರಾಜ್ಯದ ಹಲವೆಡೆ ಮಳೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕಳೆದೆರಡು ದಿನಗಳಿಂದ ರಾಜ್ಯದ ಅನೇಕ ಭಾಗಗಳಲ್ಲಿ ಸುರಿಯುತ್ತಿದೆ.

ಬಂಗಾಳಕೊಲ್ಲಿಯ ತಮಿಳುನಾಡು ಮತ್ತು ಆಂಧ್ರ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದಕ್ಕೆ ಹೊಂದಿಕೊಂಡಂತೆ 7.6 ಕಿ.ಮೀ. ಎತ್ತರದಲ್ಲಿ ಸುಳಿಗಾಳಿ ಬೀಸುತ್ತಿದೆ. ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಕೆಲವೆಡೆ ಮಳೆಯಾಗುತ್ತಿದೆ.

ಸೋಮವಾರ ರಾತ್ರಿಯವರೆಗೆ ಬೆಂಗಳೂರಿನಲ್ಲಿ 3.1 ಮಿ.ಮೀ., ಹೇಸರಘಟ್ಟದಲ್ಲಿ 5 ಮಿ.ಮೀ., ಗೋಪಾಲನಗರ, ನೈಸ್ ರಸ್ತೆಯ ಮಾದಾವರದಲ್ಲಿ ತಲಾ 6 ಮಿ.ಮೀ., ತುಮಕೂರು ಜಿಲ್ಲೆ ಮಧುಗಿರಿಯಲ್ಲಿ 7 ಮಿ.ಮೀ., ಪಾವಗಡದಲ್ಲಿ 16 ಮಿ.ಮೀ., ಚಾಮರಾಜನಗರದಲ್ಲಿ 2 ಮಿ.ಮೀ., ಕೋಲಾರದಲ್ಲಿ 3 ಮಿ.ಮೀ. ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.

ಹಿಂಗಾರು ಅಧಿಕೃತ ಆರಂಭ

ಈ ಮಧ್ಯೆ ರಾಜ್ಯದಲ್ಲಿ ಈಶಾನ್ಯ ಮಾರುತಗಳು ಪ್ರಾರಂಭವಾಗಿದ್ದು, ಸೋಮವಾರದಿಂದ ಹಿಂಗಾರು ಮಳೆ ಅಧಿಕೃತವಾಗಿ ಆರಂಭವಾಗಿದೆ. ಕೇಂದ್ರ ಹವಾಮಾನ ಇಲಾಖೆ ಅ.20ರಂದು ಹಿಂಗಾರು ಆರಂಭವಾಗುತ್ತದೆ ಎಂದು ಹೇಳಿದ್ದರೂ ಒಂದು ದಿನ ವಿಳಂಬವಾಗಿದೆ. ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆ ಇದ್ದರೂ, ಕ್ರಮೇಣ ಉತ್ತರ ಒಳನಾಡು ಮತ್ತು ಕರಾವಳಿಯಲ್ಲೂ ಮಳೆ ವ್ಯಾಪಿಸಿಕೊಳ್ಳುತ್ತದೆ. ಇದರಿಂದ ರಾಜ್ಯದಲ್ಲಿ ಇನ್ನೂ ಕೆಲ ದಿನಗಳವರೆಗೆ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ