ಆ್ಯಪ್ನಗರ

ಕೊಡಗು ಮರು ನಿರ್ಮಾಣ, ಡಿಸೆಂಬರ್‌ 8ರಂದು ಚಾಲನೆ: ಸಿಎಂ ಎಚ್‌.ಡಿ. ಕುಮಾರಸ್ವಾಮಿ

ಪ್ರವಾಹದಿಂದ ತೊಂದರೆಗೊಳಗಾದ ಕೊಡಗಿನ ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡುವ ಯೋಜನೆಗೆ ಡಿಸೆಂಬರ್‌ 8 ರಂದು ಚಾಲನೆ ನೀಡಲಾಗುವುದು ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Vijaya Karnataka Web 28 Nov 2018, 4:00 am
ಬೆಂಗಳೂರು : ಪ್ರವಾಹದಿಂದ ತೊಂದರೆಗೊಳಗಾದ ಕೊಡಗಿನ ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡುವ ಯೋಜನೆಗೆ ಡಿಸೆಂಬರ್‌ 8 ರಂದು ಚಾಲನೆ ನೀಡಲಾಗುವುದು ಎಂದು ಸಿಎಂ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
Vijaya Karnataka Web  8
ಕೊಡಗು ಮರು ನಿರ್ಮಾಣ, ಡಿಸೆಂಬರ್‌ 8ರಂದು ಚಾಲನೆ: ಸಿಎಂ ಎಚ್‌.ಡಿ. ಕುಮಾರಸ್ವಾಮಿ


ಡಿಸಿ, ಸಿಇಒಗಳ ಸಭೆ ಬಳಿಕ ಮಾತನಾಡಿದ ಅವರು, ''ಈ ಉದ್ದೇಶಕ್ಕೆ 120 ಎಕರೆ ಖರೀದಿಸಲಾಗಿದೆ. ತಲಾ 9.85 ಲಕ್ಷ ರೂ. ವೆಚ್ಚದಲ್ಲಿ 840 ಮನೆ ನಿರ್ಮಿಸಲಾಗುವುದು.ಹಣ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ,'' ಎಂದರು.

''ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದಿಂದ ಮನೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದಕ್ಕೆ 82.74 ಕೋಟಿ ರೂ. ಒದಗಿಸಲಾಗುತ್ತಿದೆ. 11.11 ಕೋಟಿ ರೂ. ಭರಿಸುವಂತೆ ವಸತಿ ನಿಗಮಕ್ಕೆ ಸೂಚಿಸಲಾಗಿದೆ. ಉಳಿದ 71.63 ಕೋಟಿ ರೂ. ಅನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೀಡಲಾಗುತ್ತಿದೆ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ