ಆ್ಯಪ್ನಗರ

11 ಶಾಸಕರು ರಾಜೀನಾಮೆ ನೀಡಿದ್ದಾರೆ: ಸ್ಪೀಕರ್ ಸ್ಪಷ್ಟನೆ

ಕ್ಷಿಪ್ರ ರಾಜಕೀಯ ಬೆಳವಣಿಗೆಯೊಂದರಲ್ಲಿ ರಾಜ್ಯದ ಸಮ್ಮಿಶ್ರ ಸರಕಾರದ 8 ಶಾಸಕರು ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಪತನಕ್ಕೆ ಕೊನೆ ಮೊಳೆ ಹೊಡೆದಿದ್ದಾರೆ.

Vijaya Karnataka Web 6 Jul 2019, 3:14 pm
ಬೆಂಗಳೂರು: 11 ಜನ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆಂದು ಕಚೇರಿಯಿಂದ ಮಾಹಿತಿ ಬಂದಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ramesh kumar


ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಭೇಟಿಗೆ ಯಾರು ಸಮಯ ಕೇಳಿರಲಿಲ್ಲ. ಪತ್ರ ಕೂಡ ಬರೆದಿರಲಿಲ್ಲ. 11 ಶಾಸಕರು ರಾಜೀನಾಮೆ ನೀಡಿದ್ದಾರೆಂದು ನನ್ನ ಕಚೇರಿಯಿಂದ ಮಾಹಿತಿ ಬಂದಿದೆ. ರಾಜೀನಾಮೆ ಪತ್ರ ಸಲ್ಲಿಸಿದ ಶಾಸಕರಿಗೆ ಸ್ವೀಕೃತಿ ಪತ್ರ ನೀಡಲಾಗಿದೆ ಎಂದು ಹೇಳಿದ್ದಾರೆ.

ನಾಳೆ ಭಾನುವಾರ ಕಚೇರಿಗೆ ರಜೆ ಇದ್ದು, ಸೋಮವಾರ ಪೂರ್ವ ನಿಗದಿತ ಕಾರ್ಯಕ್ರಮವಿರುವ ಕಾರಣ ಕಚೇರಿಗೆ ಬರುವುದಿಲ್ಲ. ಮಂಗಳವಾರ ಕಚೇರಿಗೆ ಬಂದು ರಾಜೀನಾಮೆ ಪತ್ರ ಪರಿಶೀಲಿಸುತ್ತೇನೆ ಎಂದಿದ್ದಾರೆ.

ಸ್ವೀಕರ್ ರಮೇಶ್ ಕುಮಾರ್ ಅವರು ಕಚೇರಿಯಲ್ಲಿರದ ಕಾರಣ ಕಾಂಗ್ರೆಸ್‌ನ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ‌, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಸೇರಿದಂತೆ ಮಹಾಲಕ್ಷೀ‌ ಲೇಔಟ್ ಶಾಸಕ ಗೋಪಾಲಯ್ಯ, ಹುಣಸೂರು ಶಾಸಕ ವಿಶ್ವನಾಥ್ ಮತ್ತು ಕೆ.ಆರ್‌ ಪೇಟೆ ಶಾಸಕ ನಾರಾಯಣ ಗೌಡ ಅವರು ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿ ರಾಜಭವನದತ್ತ ಹೊರಟಿದ್ದರೆ, ಇನ್ನುಳಿದ ನಾಲ್ವರು ಅತೃಪ್ತ ಶಾಸಕರ ಮನವೊಲಿಕೆಗೆ ಸಚಿವ ಡಿ.ಕೆ.ಶಿವಕುಮಾರ್ ಯತ್ನಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ