ಆ್ಯಪ್ನಗರ

19 ಸಾವಿರ ರೈತರಿಗೆ ಸಹಕಾರ ಸಾಲ ರಾಜ್ಯಾದ್ಯಂತ 12,420 ಕೋಟಿ ರೂ. ವಿತರಣೆ

ಪ್ರಸಕ್ತ ಸಾಲಿನಲ್ಲಿ ಒಟ್ಟು 24.40 ಲಕ್ಷ ರೈತರಿಗೆ ಸುಮಾರು 15,300 ಕೋಟಿ ರೂ.ಗಳಿಗೂ ಹೆಚ್ಚು ಸಾಲ ನೀಡುವ ಗುರಿ ಹೊಂದಲಾಗಿದೆ. ಇನ್ನೂ ಸುಮಾರು ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ರೈತರಿಗೆ ಶೀಘ್ರ ಸೌಲ ವಿತರಣೆ ಮಾಡಲಾಗುವುದು.

Vijaya Karnataka Web 17 Jan 2021, 9:03 pm
ಬೆಂಗಳೂರು: ಕೋವಿಡ್‌-19 ಮಹಾಮಾರಿ ನಡುವೆ ಈ ಬಾರಿ ಸಹಕಾರ ಇಲಾಖೆ ರಾಜ್ಯಾದ್ಯಂತ 19,17,334 ರೈತರಿಗೆ ಒಟ್ಟು 12,420.10 ಕೋಟಿ ರೂ.ಗಳಷ್ಟು ಸಾಲ ಸೌಲಭ್ಯ ವಿತರಿಸಿದೆ.
Vijaya Karnataka Web ರೈತರ ಸಾಲ
ರೈತರ ಸಾಲ


''2019-20ನೇ ಸಾಲಿನಲ್ಲಿ ಸಹಕಾರಿ ಸಂಘಗಳ ಮೂಲಕ 13,500 ಕೋಟಿ ರೂ. ಸಾಲ ನೀಡಲಾಗಿತ್ತು. 2020-21ನೇ ಸಾಲಿನಲ್ಲಿ ಕೊರೊನಾದಿಂದಾಗಿ ಆರ್ಥಿಕ ಸಂಕಷ್ಟ ಎದುರಾದಾಗ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಳಜಿಗೆ ಸ್ಪಂದಿಸಿ ಸಹಕಾರ ಇಲಾಖೆ ಮೂಲಕ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಸಾಲ ಸೌಲಭ್ಯ ನೀಡಲಾಗಿದೆ'' ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದ್ದಾರೆ.

''ಪ್ರಸಕ್ತ ಸಾಲಿನಲ್ಲಿ ಒಟ್ಟು 24.40 ಲಕ್ಷ ರೈತರಿಗೆ ಸುಮಾರು 15,300 ಕೋಟಿ ರೂ.ಗಳಿಗೂ ಹೆಚ್ಚು ಸಾಲ ನೀಡುವ ಗುರಿ ಹೊಂದಲಾಗಿದೆ. ಇನ್ನೂ ಸುಮಾರು ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ರೈತರಿಗೆ ಶೀಘ್ರ ಸೌಲ ವಿತರಣೆ ಮಾಡಲಾಗುವುದು. ದೇಶದ ಬೆನ್ನೆಲುಬಾಗಿರುವ ರೈತ ಸದಾ ಹಸನಾಗಿರಬೇಕು ಎಂಬುದು ನಮ್ಮ ಸರಕಾರದ ಉದ್ದೇಶವಾಗಿದೆ'' ಎಂದು ಹೇಳಿದರು.

''ರೈತರಿಗೆ ಬ್ಯಾಂಕ್‌ಗಳು ಮತ್ತು ಸಹಕಾರ ಸಂಘಗಳು ಸಾಲ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಅಧಿಕಾರಿಗಳ ಸಭೆ ನಡೆಸಿ ರೈತರಿಗೆ ತೊಂದರೆ ನೀಡದಂತೆ ತಾಕೀತು ಮಾಡಿದ್ದೇನೆ. ಜಿಲ್ಲಾಪ್ರವಾಸದ ವೇಳೆ ಸಹ ಸಭೆಗಳನ್ನು ನಡೆಸಿ ಕಾಲಕಾಲಕ್ಕೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ಸಾಲ ವಿತರಣೆಯಲ್ಲಿಲೋಪವಾಗಬಾರದೆಂಬ ಕಟ್ಟುನಿಟ್ಟಿನ ಆದೇಶ ನೀಡಿದ್ದೇನೆ. ಅಧಿಕಾರಿಗಳೂ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಸುಲಭವಾಗಿ ರೈತರಿಗೆ ಸಾಲ ಸಿಗುವಂತೆ ವ್ಯವಸ್ಥೆ ಮಾಡಲಾಗಿದ್ದು, ಈ ನಿಟ್ಟಿನಲ್ಲಿ ಅಪೆಕ್ಸ್‌ ಬ್ಯಾಂಕ್‌, 21 ಡಿಸಿಸಿ ಬ್ಯಾಂಕ್‌ ಹಾಗೂ ಪ್ಯಾಕ್ಸ್‌ಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ'' ಎಂದು ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ