ಆ್ಯಪ್ನಗರ

ರಾಜ್ಯದ 20 ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ನಿರ್ಧಾರ

ರೈಲ್ವೆ ಇಲಾಖೆಯಲ್ಲಿ ಈಗ ಸುಧಾರಣಾ ಯೋಜನೆಗಳನ್ನು ಕೈಗೊಳ್ಳಲು ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕದ 20ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಆದ್ಯತೆ ನೀಡಲಾಗಿದೆ.

Vijaya Karnataka Web 5 Nov 2019, 10:17 pm
ಬೆಂಗಳೂರು: ರಾಜ್ಯದ 20 ರೈಲ್ವೆ ನಿಲ್ದಾಣಗಳನ್ನು ಎ ದರ್ಜೆಗೆ ಏರಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.
Vijaya Karnataka Web ರೈಲು
ರೈಲು


ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ರೈಲ್ವೆ ಯೋಜನೆ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಬೆಂಗಳೂರು ನಗರ. ಯಶವಂತಪುರ, ಕಲಬುರಗಿ, ರಾಯಚೂರು, ಯಾದಗಿರಿ, ಮಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಬಂಗಾರಪೇಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ದಾರವಾಡ, ಹೊಸಪೇಟೆ, ಮೈಸೂರು, ಶಿವಮೊಗ್ಗ ಸೇರಿದಂತೆ 20 ರೈಲ್ವೆ ನಿಲ್ದಾಣಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು.

ಈಗಾಗಲೇ ಮಂಜೂರಾತಿ ಪಡೆದಿರುವ ಯೋಜನೆಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸುಂತೆ ರೈಲ್ವೇ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ