ಆ್ಯಪ್ನಗರ

26ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ

ಸಮಾವೇಶದ ಪೂರ್ವಭಾವಿಯಾಗಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಸಹಯೋಗದಲ್ಲಿ ನವೆಂಬರ್‌ ತಿಂಗಳ ಮಧ್ಯಭಾಗದಲ್ಲಿ ಜಿಲ್ಲಾ ಮಟ್ಟದ ಸಮಾವೇಶ ಹಾಗೂ ಡಿಸೆಂಬರ್‌ ಮೊದಲ ವಾರದಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಸಲಿದೆ.

Vijaya Karnataka 21 Oct 2018, 7:44 am
ಬೆಂಗಳೂರು: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಡಿ.27 ರಿಂದ 31ರವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ 26ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ - 2018 ಆಯೋಜಿಸಿದೆ.
Vijaya Karnataka Web photo


ಸಮಾವೇಶದ ಪೂರ್ವಭಾವಿಯಾಗಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಸಹಯೋಗದಲ್ಲಿ ನವೆಂಬರ್‌ ತಿಂಗಳ ಮಧ್ಯಭಾಗದಲ್ಲಿ ಜಿಲ್ಲಾ ಮಟ್ಟದ ಸಮಾವೇಶ ಹಾಗೂ ಡಿಸೆಂಬರ್‌ ಮೊದಲ ವಾರದಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಸಲಿದೆ. 10 ರಿಂದ 17 ವರ್ಷದ ಯಾವುದೇ ಮಾಧ್ಯಮದ ವಿದ್ಯಾರ್ಥಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪರಿಷತ್ತು ಗೌರವ ಕಾರ್ಯದರ್ಶಿ ಗಿರೀಶ ಕಡ್ಲೇವಾಡ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.

''ಈ ಬಾರಿ 'ಸ್ವಚ್ಛ ಹಸಿರು ಮತ್ತು ಆರೋಗ್ಯವಂತ ರಾಷ್ಟ್ರಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಗಳು' ಶೀರ್ಷಿಕೆಯಡಿ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನ ಪಡೆದು ಅಧ್ಯಯನ ಕೈಗೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಪ್ರಬಂಧ ಮಂಡಿಸುವ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿವೆ. ರಾಜ್ಯಮಟ್ಟದಲ್ಲಿ ಅತ್ಯುತ್ತಮ ಪ್ರಬಂಧ ಮಂಡಿಸುವ 30 ತಂಡಗಳು ರಾಷ್ಟ್ರಮಟ್ಟದ ಸಮಾವೇಶದಲ್ಲಿ ಭಾಗವಹಿಸಲು ಅವಕಾಶ ಪಡೆಯಲಿವೆ. ಕಿರಿಯರ ವಿಭಾಗದಲ್ಲಿ 10-14 ವಯೋಮಿತಿಯ ಹಾಗೂ ಹಿರಿಯ ವಿಭಾಗದಲ್ಲಿ 14-17 ವಯೋಮಿತಿಯ ಮಕ್ಕಳು ಭಾಗವಹಿಸಬಹುದಾಗಿದೆ,'' ಎಂದು ಹೇಳಿದರು.

''ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಚಟುವಟಿಕೆಗಳ ಸಂಪನ್ಮೂಲ ಕೈಪಿಡಿ ಲಭ್ಯವಿದ್ದು, ವಾಟ್ಸ್‌ ಆ್ಯಪ್‌ ನಂ.9008442557 ಸಂಪರ್ಕಿಸಿ ಮಾಹಿತಿ ಮತ್ತು ಕೈಪಿಡಿ ಪಡೆಯಬಹುದಾಗಿದೆ. ಅಥವಾ ವೆಬ್‌ಸೈಟ್‌ www.krvp.org ನಲ್ಲಿ ಮಾಹಿತಿ ದೊರೆಯಲಿದೆ ,''ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಪರಿಷತ್ತಿನ ರಾಜ್ಯ ಸಂಯೋಜಕ ಎಚ್‌.ಜಿ.ಹುದ್ದಾರ, ರಾಜ್ಯ ಶೈಕ್ಷ ಣಿಕ ಸಂಯೋಜಕ ಸಿ.ಕೃಷ್ಣೇಗೌಡ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ