ಆ್ಯಪ್ನಗರ

ದ್ವಿತೀಯ ಪಿಯುಸಿ, ಕೆಪಿಎಸ್‌ಸಿ ಪರೀಕ್ಷೆ ಮುಂದಕ್ಕೆ

ಸಿದ್ಧಗಂಗಾ ಶ್ರೀ ಶಿವಕುಮಾರಸ್ವಾಮೀಜಿ ನಿಧನ ಹಿನ್ನೆಲೆಯಲ್ಲಿ ಸರಕಾರಿ ರಜೆ ಘೋಷಣೆ ಮಾಡಿರುವುದರಿಂದ ಮಂಗಳವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ಸೇರಿದಂತೆ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅದೇ ರೀತಿ ನಾನಾ ಹುದ್ದೆಗಳ ನೇಮಕ ಕುರಿತು ಮಂಗಳವಾರ ನಡೆಯಬೇಕಿದ್ದ ಸಂದರ್ಶನ ಹಾಗೂ ದಾಖಲೆ ಪರಿಶೀಲನೆಯನ್ನು ಮುಂದೂಡಲಾಗಿದೆ.

Vijaya Karnataka 22 Jan 2019, 5:00 am
ಬೆಂಗಳೂರು : ಸಿದ್ಧಗಂಗಾ ಶ್ರೀ ಶಿವಕುಮಾರಸ್ವಾಮೀಜಿ ನಿಧನ ಹಿನ್ನೆಲೆಯಲ್ಲಿ ಸರಕಾರಿ ರಜೆ ಘೋಷಣೆ ಮಾಡಿರುವುದರಿಂದ ಮಂಗಳವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ಸೇರಿದಂತೆ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅದೇ ರೀತಿ ನಾನಾ ಹುದ್ದೆಗಳ ನೇಮಕ ಕುರಿತು ಮಂಗಳವಾರ ನಡೆಯಬೇಕಿದ್ದ ಸಂದರ್ಶನ ಹಾಗೂ ದಾಖಲೆ ಪರಿಶೀಲನೆಯನ್ನು ಮುಂದೂಡಲಾಗಿದೆ.
Vijaya Karnataka Web 2nd puc preparatory exam postponed
ದ್ವಿತೀಯ ಪಿಯುಸಿ, ಕೆಪಿಎಸ್‌ಸಿ ಪರೀಕ್ಷೆ ಮುಂದಕ್ಕೆ


ಕೆಪಿಎಸ್‌ಸಿ ಮಂಗಳವಾರ(ಜ.22) ನಡೆಸಬೇಕಿದ್ದ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಯನ್ನು ಫೆ.1ಕ್ಕೆ ಮುಂದೂಡಲಾಗಿದೆ. ಪರೀಕ್ಷಾ ಕೇಂದ್ರ ಹಾಗೂ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಆಯೋಗ ತಿಳಿಸಿದೆ.

ದಾಖಲೆ ಪರಿಶೀಲನೆ ಮುಂದಕ್ಕೆ

ಜ.22ರಂದೇ ನಿಗದಿಯಾಗಿದ್ದ ನಿಲಯ ಪಾಲಕರು ಹಾಗೂ ಚಿತ್ರಕಲಾ ಶಿಕ್ಷಕರ ಪರೀಕ್ಷೆಯ ಮೂಲ ದಾಖಲೆ ಪರಿಶೀಲನೆ ಹಾಗೂ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ದೈಹಿಕದಾರ್ಢ್ಯತೆ ಪರೀಕ್ಷೆಯನ್ನು ಕೂಡ ಮುಂದೂಡಲಾಗಿದೆ ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ನೇಮಕ ಮುಂದಕ್ಕೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಮೇಲ್ವಿಚಾರಕೇತರ ದರ್ಜೆ-3 ನಾನಾ ಹುದ್ದೆಗಳ ಆಯ್ಕೆ ಸಂಬಂಧ ಜ.22 ರಂದು ನಿಗದಿಯಾಗಿದ್ದ ಮೂಲ ದಾಖಲೆ ಪರಿಶೀಲನೆಯನ್ನು ಜ.28ಕ್ಕೆ ಮುಂದೂಡಲಾಗಿದೆ. ಎಲ್ಲ ಅರ್ಹ ಅಭ್ಯರ್ಥಿಗಳು ಜ.28ರಂದು ಹಾಜರಾಗಬೇಕೆಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ