ಆ್ಯಪ್ನಗರ

ಪರಿಷತ್‌ ಚುನಾವಣೆ: ಶಂಕರ್‌, ಎಂಟಿಬಿ ಸೇರಿ 7 ಅಭ್ಯರ್ಥಿಗಳು ಮೇಲ್ಮನೆಗೆ ಅವಿರೋಧ ಆಯ್ಕೆ

ಮೇಲ್ಮನೆ ಚುನಾವಣೆಗೆ ಒಟ್ಟು 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಆದರೆ ಪಕ್ಷೇತರರಿಬ್ಬರ ನಾಮಪತ್ರ ಸೂಚಕರಿಲ್ಲದೆ ತಿರಸ್ಕೃತವಾಗಿತ್ತು. ಹೀಗಾಗಿ ಕೇವಲ 7 ಜನರು ಮಾತ್ರ ಚುನಾವಣಾ ಕಣದಲ್ಲಿ ಉಳಿದಿದ್ದರು. ಇವರೆಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Vijaya Karnataka 22 Jun 2020, 11:01 pm

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ನಾಲ್ವರು, ಕಾಂಗ್ರೆಸ್‌ನ ಇಬ್ಬರು ಹಾಗೂ ಜೆಡಿಎಸ್‌ನ ಒಬ್ಬರು ಎಂಎಲ್‌ಸಿಯಾಗಿ ಆಯ್ಕೆಯಾಗಿದ್ದಾರೆ.
Vijaya Karnataka Web BK Hariprasad


ಮೇಲ್ಮನೆ ಚುನಾವಣೆಗೆ ಒಟ್ಟು 9 ಜನರು ನಾಮಪತ್ರ ಸಲ್ಲಿಸಿದ್ದರು. ಆದರೆ ಪಕ್ಷೇತರರಿಬ್ಬರ ನಾಮಪತ್ರ ಸೂಚಕರಿಲ್ಲದೆ ತಿರಸ್ಕೃತವಾಗಿತ್ತು. ಹೀಗಾಗಿ ಕೇವಲ 7 ಜನರು ಮಾತ್ರ ಚುನಾವಣಾ ಕಣದಲ್ಲಿ ಉಳಿದಿದ್ದರು. ಸೋಮವಾರ ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದ್ದು, ಯಾರೂ ನಾಮಪತ್ರ ವಾಪಸ್‌ ಪಡೆಯದ ಹಿನ್ನೆಲೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಇವರಲ್ಲಿ ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಹಾಗೂ ಬಿಜೆಪಿಯ ಎಂ.ಟಿ.ಬಿ. ನಾಗರಾಜ್, ಆರ್‌. ಶಂಕರ್‌‌ ಮತ್ತು ಪ್ರತಾಪ್‌ಸಿಂಹ ನಾಯಕ್‌ ಸೋಮವಾರ ಅಪರಾಹ್ನ ಪರಿಷತ್ ಸದಸ್ಯತ್ವ ಪ್ರಮಾಣ ಪತ್ರವನ್ನೂ ಪಡೆದುಕೊಂಡಿದ್ದಾರೆ. ವಿಧಾನಸಭೆ ಕಾರ್ಯದರ್ಶಿಯಿಂದ ಅವರು ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ.
ಪರಿಷತ್‌ ಚುನಾವಣೆ: 7 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, ಅವಿರೋಧ ಆಯ್ಕೆ ಖಚಿತ

ನಜೀರ್‌ ಅಹ್ಮದ್ ಕಾಂಗ್ರೆಸ್‌ನಿಂದ ಪರಿಷತ್‌ಗೆ ಆಯ್ಕೆಯಾದ ಇನ್ನೋರ್ವ ಸದಸ್ಯರಾಗಿದ್ದಾರೆ. ಇವರ ಜೊತೆಗೆ ಬಿಜೆಪಿಯ ಎಂ.ಟಿ.ಬಿ. ನಾಗರಾಜ್‌, ಪ್ರತಾಪ್‌ ಸಿಂಹ ನಾಯಕ್‌, ಆರ್‌‌. ಶಂಕರ್‌, ಸುನೀಲ್‌ ವಲ್ಯಾಪುರ ಹಾಗೂ ಜೆಡಿಎಸ್‌ನ ಗೋವಿಂದ ರಾಜು ಎಂಎಲ್‌ಸಿಗಳಾದ ಆಯ್ಕೆಯಾದ ಉಳಿದ ಸದಸ್ಯರಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ