ಆ್ಯಪ್ನಗರ

Congress Freedom March | ಬೆಂಗಳೂರಿನಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ: ಪ್ರಮುಖ ಹೈಲೈಟ್ಸ್ ಇಲ್ಲಿದೆ

Congress padayatre in Bengaluru: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಕೆಪಿಸಿಸಿ ಹಮ್ಮಿಕೊಂಡಿದ್ದ ಪಾದಯಾತ್ರೆ ಹೆಚ್ಚಿನ ಸಂಖ್ಯೆಯ ಜನರು ಭಾಗಿಯಾಗಿದ್ದರು. ಸಂಗೊಳ್ಳಿ ರಾಯಣ್ಣ ಸರ್ಕಲ್ ನಿಂದ ನ್ಯಾಷನಲ್ ಕಾಲೇಜು ಮೈದಾನದವರೆಗೆ ಪಾದಯಾತ್ರೆ ನಡೆಯಿತು. ಮಧ್ಯಾಹ್ನ ಎರಡು ಗಂಟೆಗೆ ಆರಂಭವಾದ ಪಾದಯಾತ್ರೆ ಸುಮಾರು ಏಳು ಕಿಲೋ ಮೀಟರ್ ಸಾಗಿ ಸಂಜೆ 5.10 ನ್ಯಾಷನಲ್ ಕಾಲೇಜು ಮೈದಾನಕ್ಕೆ ತಲುಪಿತು. ಪಾದಯಾತ್ರೆಯಲ್ಲಿ ಗಮನ ಸೆಳೆದ ಪ್ರಮುಖ ಅಂಶಗಳು ಇಲ್ಲಿವೆ.

Edited byಹೇಮಂತ್ ಕುಮಾರ್ ಎಸ್ | Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 15 Aug 2022, 7:44 pm

ಹೈಲೈಟ್ಸ್‌:

  • ಕಾರ್ಯಕರ್ತರ ನಿಯಂತ್ರಣಕ್ಕೆ ಲಾಠಿ‌ ಪ್ರಯೋಗ
  • ಪ್ರತ್ಯೇಕ ನಡೆದ ಡಿಕೆಶಿ ಸಿದ್ದರಾಮಯ್ಯ
  • ಪಾದಯಾತ್ರಿಗಳಿಗೆ ತಿಂಡಿ ಹಣ್ಣುಹಂಪಲು
  • ಗಮನ ಸೆಳೆದ ಸ್ವಾತಂತ್ರ ಹೋರಾಟಗಾರ ಫೋಟೋಗಳು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web DK Shivakumara in padayatre
ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಯಲ್ಲಿ ಡಿ.ಕೆ.ಶಿವಕುಮಾರ್
ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಕೆಪಿಸಿಸಿ ಹಮ್ಮಿಕೊಂಡಿದ್ದ ಪಾದಯಾತ್ರೆ ಹೆಚ್ಚಿನ ಸಂಖ್ಯೆಯ ಜನರು ಭಾಗಿಯಾಗಿದ್ದರು. ಸಂಗೊಳ್ಳಿ ರಾಯಣ್ಣ ಸರ್ಕಲ್ ನಿಂದ ನ್ಯಾಷನಲ್ ಕಾಲೇಜು ಮೈದಾನದವರೆಗೆ ಪಾದಯಾತ್ರೆ ನಡೆಯಿತು. ಮಧ್ಯಾಹ್ನ ಎರಡು ಗಂಟೆಗೆ ಆರಂಭವಾದ ಪಾದಯಾತ್ರೆ ಸುಮಾರು ಏಳು ಕಿಲೋ ಮೀಟರ್ ಸಾಗಿ ಸಂಜೆ 5.10 ನ್ಯಾಷನಲ್ ಕಾಲೇಜು ಮೈದಾನಕ್ಕೆ ತಲುಪಿತು. ಪಾದಯಾತ್ರೆಯಲ್ಲಿ ಗಮನ ಸೆಳೆದ ಪ್ರಮುಖ ಅಂಶಗಳು ಇಲ್ಲಿವೆ.

ಕಾರ್ಯಕರ್ತರ ನಿಯಂತ್ರಣಕ್ಕೆ ಲಾಠಿ‌ ಪ್ರಯೋಗ
ನ್ಯಾಷನಲ್ ಕಾಲೇಜು ಬಳಿ ಪಾದಯಾತ್ರೆಯಲ್ಲಿ ಭಾಗಿಯಾದ ಕಾರ್ಯಕರ್ತರನ್ನು ನಿಯಂತ್ರಣ ಮಾಡಲು ಪೊಲೀಸರು ಲಾಠಿ ಪ್ರಯೋಗ ಮಾಡಿದರು. ನಾಯಕರ ಜೊತೆ ಬ್ಯಾರಿಕೇಡ್ ತಳ್ಳಿ ಮುಂದೆ ಹೋಗಲು ಪ್ರಯತ್ನಿಸಿದ ಸಂದರ್ಭದಲ್ಲಿ ಕೆಲವರಿಗೆ ಲಾಠಿ ಏಟು ನೀಡಿ ನಿಯಂತ್ರಣ ಮಾಡಬೇಕಾಯಿತು.
75th independence day: ರಾಜ್ಯ ಕಾಂಗ್ರೆಸ್‍ನಿಂದ ಸ್ವಾತಂತ್ರ್ಯದ ನಡಿಗೆ ಪಾದಯಾತ್ರೆ ಆರಂಭ
ಪ್ರತ್ಯೇಕ ನಡೆದ ಡಿಕೆಶಿ ಸಿದ್ದರಾಮಯ್ಯ

ಸ್ವಾತಂತ್ರದ ನಡಿಗೆ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತ್ಯೇಕವಾಗಿ ನಡೆದರು. ಡಿಕೆಶಿ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆಯಾಗಿ ಹೆಜ್ಜೆ ಹಾಕಿದರೆ, ಸಿದ್ದರಾಮಯ್ಯ ಹಾಗೂ ಆಪ್ತ ಶಾಸಕರು ಜೊತೆಯಾಗಿ ಹೆಜ್ಜೆ ಹಾಕಿದರು.

ಕಾಂಗ್ರೆಸ್‌ ಪಾದಯಾತ್ರೆ


ಪಾದಯಾತ್ರಿಗಳಿಗೆ ತಿಂಡಿ ಹಣ್ಣುಹಂಪಲು

ಮದ್ದೂರು ವಡಾ, ತಟ್ಟೆ ಇಡ್ಲಿ, ಬಜ್ಜಿ, ಹಣ್ಣು ಹಂಪಲು ಮಜ್ಜಿಗೆ ಸೇರಿದಂತೆ ತಂಪು ಪಾನಿಯಗಳನ್ನು ದಾರಿಯುದ್ದಕ್ಕೂ ಪಾದಯಾತ್ರಿಗಳಿಗೆ ವಿತರಿಸಲಾಯಿತು.
ಸರಕಾರವು ತಳ್ಳಿಕೊಂಡು ಹೋಗುವ ಸ್ಥಿತಿಗೆ ಬಂದಿರುವುದು ದುರಂತ: ಮಾಧುಸ್ವಾಮಿ ಆಡಿಯೋಗೆ ಕಾಂಗ್ರೆಸ್ ಟ್ವೀಟ್
ಗಮನ ಸೆಳೆದ ಸ್ವಾತಂತ್ರ ಹೋರಾಟಗಾರ ಫೋಟೋಗಳು

ಸಂಗೊಳ್ಳಿ ರಾಯಣ್ಣ ಸರ್ಕಲ್‌ನಿಂದ ನ್ಯಾಷನಲ್ ಕಾಲೇಜು ಮೈದಾನದವರೆಗೆ ಸಾಗಿದ ಪಾದಯಾತ್ರೆ ದಾರಿಯುದ್ದಕ್ಕೂ ಸ್ವಾತಂತ್ರ ಹೋರಾಟಗಾರ ಫೋಟೋ ಗಮನಸೆಳೆಯುವಂತಿತ್ತು. ಮಹಾತ್ಮ ಗಾಂಧಿ, ನೆಹರೂ, ಸುಭಾಷ್ ಚಂದ್ರ ಬೋಸ್, ಅಬ್ದುಲ್‌ ಕಲಾಮ್ ಆಜಾದ್‌ ಸೇರಿದಂತೆ ಸ್ವಾತಂತ್ರ ಹೋರಾಟಗಾರರ ಫೋಟೋ ಇರುವ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು.
ದೇಶ ಧರ್ಮಾಧಾರಿತವಾಗ್ತಿದೆ, ಪ್ರಜಾಪ್ರಭುತ್ವ ನಾಶವಾಗ್ತಿದೆ: ಸಿದ್ದರಾಮಯ್ಯ ಆತಂಕ
ಡಿಕೆಶಿ ಪರವಾಗಿ ಘೋಷಣೆ

ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಬಣದ ವಿರೋಧ ಇತ್ತು. ಹುಟ್ಟುಹಬ್ಬದ ಮೂಲಕ ವ್ಯಕ್ತಿ ಪೂಜೆ ಮಾಡಲಾಗುತ್ತಿದೆ ಎಂಬ ಆರೋಪ ಮಾಡಲಾಗಿತ್ತು. ಇದಕ್ಕೆ ಪರ್ಯಾಯವಾಗಿ ಸ್ವಾತಂತ್ರದ ನಡಿಗೆಯನ್ನು ಯಶಸ್ವಿಯಾಗಿ ಮಾಡಲು ಡಿಕೆಶಿ ಬಣ ಪ್ಲ್ಯಾನ್ ಮಾಡಿತ್ತು. ಪಾದಯಾತ್ರೆಯಲ್ಲಿ ಅದರ ಪರಿಣಾಮಗಳು ಕಂಡು ಬಂದವು. ಡಿಕೆಶಿ ಪರವಾಗಿ ಘೋಷಣೆಗಳು ಕೇಳಿಬಂದವು.

ಬೆಂಗಳೂರು ಮೆಟ್ರೋ


ಮೆಟ್ರೋ ತುಂಬಾ ಜನವೋ ಜನ

ಕಾಂಗ್ರೆಸ್ ನಡಿಗೆ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವವರಿಗಾಗಿ ಉಚಿತ ಮೆಟ್ರೋ ಪ್ರಯಾಣಕ್ಕೆ ಕಾಂಗ್ರೆಸ್ ವ್ಯವಸ್ಥೆ ಕಲ್ಪಿಸಿದೆ. ಇದಕ್ಕಾಗಿ ಸುಮಾರು ಒಂದು ಲಕ್ಷ ಟಿಕೆಟ್ ಖರೀದಿ ಮಾಡಿದೆ. ಈ ಹಿನ್ನಲೆಯಲ್ಲಿ ಮೆಟ್ರೋ ನಿಲ್ದಾಣ ತುಂಬಿ ತುಳುಕುತ್ತಿದೆ. ನ್ಯಾಷನಲ್ ಕಾಲೇಜು ಮೈದಾನದಿಂದ ಪ್ರಯಾಣಿಕರು ಮೆಟ್ರೋ ಮೂಲಕ ಪ್ರಯಾಣಿಸಿದರು. ಜನರನ್ನು ನಿಯಂತ್ರಣ ಮಾಡಲು ಮೆಟ್ರೋ ಸಿಬ್ಬಂದಿ ಹರಸಾಹಸ ಪಡುವಂತಾಗಿದೆ.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ