ಆ್ಯಪ್ನಗರ

ಮೇಕೆದಾಟು ಜಲಾಶಯ ನಿರ್ಮಾಣ ಜೀವಂತ: ರಮೇಶ್‌ ಜಾರಕಿಹೊಳಿ

ಮೇಕೆದಾಟು ಶೇಖರಣಾ ಜಲಾಶಯ ಯೋಜನೆ ಜೀವಂತವಾಗಿದ್ದು, ಕಾರ್ಯಗತಗೊಳಿಸಲು ಬದ್ಧವಾಗಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

Vijaya Karnataka Web 29 May 2020, 12:35 pm
ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ಶೇಖರಣಾ ಜಲಾಶಯ ಯೋಜನೆ ಜೀವಂತವಾಗಿದ್ದು, ಕಾರ್ಯಗತಗೊಳಿಸಲು ಬದ್ಧವಾಗಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ramesh jarkiholi


''ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯಗಳ ಕೆಳಭಾಗದಲ್ಲಿ ಬಿಳಿ ಗುಂಡ್ಲುವರೆಗೆ ನೀರನ್ನು ಸಂಗ್ರಸಲು ಯಾವುದೇ ಅಣೆಕಟ್ಟು ಇಲ್ಲ. ಈ ಹಿನ್ನೆಲೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ಶೇಖರಣಾ ಜಲಾಶಯವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯು ಕೇಂದ್ರ ಜಲ ಆಯೋಗ 2018ರ ನ. 22ರಂದು ಯೋಜನಾ ವರದಿ ತಯಾರಿಸಲು ತಾತ್ವಿಕ ಅನುಮೋದನೆ ನೀಡಿದೆ. ಬಳಿಕ 9 ಸಾವಿರ ಕೋಟಿ ರೂ.ಗಳ ಮೊತ್ತದ ಯೋಜನಾ ವರದಿಯನ್ನು ತಯಾರಿಸಿ 2019ರ ಜ. 18ರಂದು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ,'' ಎಂದರು.

''ಕಾವೇರಿ ನ್ಯಾಯಾಧಿಕರಣದ ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ನಾವು ತಮಿಳುನಾಡು ರಾಜ್ಯಕ್ಕೆ ಮಾಸಿಕವಾಗಿ ನಿಗದಿಪಡಿಸಿದ ವಾರ್ಷಿಕ ನೀರಿನ ಪ್ರಮಾಣ 177.25 ಟಿ.ಎಂ.ಸಿ ಹರಿಸಲು ಹಾಗೂ 400 ಮೆ.ವ್ಯಾಟ್‌ ವಿದ್ಯುತ್‌ ಉತ್ಪಾದಿಸಲು, ಬೆಂಗಳೂರು ನಗರಕ್ಕೆ 4.75 ಟಿ.ಎಂ.ಸಿ ಕುಡಿಯುವ ನೀರನ್ನು ಒದಗಿಸಲು ಉದ್ದೇಶಿಸಿದ್ದೇವೆ,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ