ಆ್ಯಪ್ನಗರ

ಶಿರಾ ಬೈಎಲೆಕ್ಷನ್ ಗೆಲುವಿಗೆ ಕಾಂಗ್ರೆಸ್ ರಣತಂತ್ರ; ಡಿಕೆಶಿ ನೇತೃತ್ವದಲ್ಲಿ ಕೈ ನಾಯಕರ ಮಹತ್ವದ ಸಭೆ

ಕೊರೊನಾದಿಂದ ಗುಣಮುಖರಾದ ಬಳಿಕ ಇದೇ ಮೊದಲ ಬಾರಿಗೆ ಡಿಕೆಶಿ ಕಚೇರಿಗೆ ಆಗಮಿಸಿದ್ದು, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆಯೊಂದು ನಡೆದಿದೆ.

Vijaya Karnataka Web 16 Sep 2020, 12:01 pm
ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದಲ್ಲಿ ಈಗಾಗಲೇ ರಣತಂತ್ರ ಆರಂಭವಾಗಿದೆ. ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್‌ ಪಣತೊಟ್ಟಿದೆ.
Vijaya Karnataka Web congress


ಸದನದಲ್ಲಿ ಹೋರಾಟಕ್ಕೆ ಕಾಂಗ್ರೆಸ್ ತಂತ್ರ, ಬುಧವಾರ ನಡೆಯಲಿದೆ ಶಾಸಕಾಂಗ ಪಕ್ಷದ ಸಭೆ

ಈ ಹಿನ್ನೆಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆಯೊಂದು ನಡೆದಿದೆ. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ವೇಳೆ ಶಿರಾ ಕ್ಷೇತ್ರದಲ್ಲಿ ಟಿಕೆಟ್ ನೀಡುವ ಕುರಿತು ಮತ್ತು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಮುಖಂಡರ ನಡುವೆ ಚರ್ಚೆ ನಡೆದಿದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೊರೊನಾ ಪಾಸಿಟಿವ್ ದೃಢ..!

ಕೊರೊನಾದಿಂದ ಗುಣಮುಖರಾದ ಬಳಿಕ ಇದೇ ಮೊದಲ ಬಾರಿಗೆ ಡಿಕೆಶಿ ಕಚೇರಿಗೆ ಆಗಮಿಸಿದ್ದು, ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಮಾಜಿ ಸಚಿವ ಟಿ.ಬಿ ಜಯಚಂದ್ರ, ಮಾಜಿ ಸಂಸದ ಮುದ್ದಹನುಮೇಗೌಡ, ಬಿ.ಎನ್ ಚಂದ್ರಪ್ಪ, ಮಾಜಿ ಶಾಸಕ ಕೆ.ಎನ್ ರಾಜಣ್ಣ ಸೇರಿದಂತೆ ಮತ್ತಿತರರ ನಾಯಕರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ