ಆ್ಯಪ್ನಗರ

ಕೊರೊನಾ ನೆಪದಲ್ಲಿ 10 ಸಾವಿರ ಕೋಟಿಯ ಬೃಹತ್ ಹಗರಣ: ಆಮ್ ಆದ್ಮಿ ಪಕ್ಷ ಆರೋಪ

ಕೊರೊನಾ ನೆಪದಲ್ಲಿ ರಾಜ್ಯ ಸರ್ಕಾರ 10 ಸಾವಿರ ಕೋಟಿಯ ಬೃಹತ್ ಹಗರಣ ನಡೆಸಿದೆ ಎಂದು ಆಮ್‌ಆದ್ಮಿ ಪಕ್ಷ ಆರೋಪ ಮಾಡಿದೆ. ಕೋವಿಡ್‌ ನಿರ್ವಹಣೆಯ ಹೆಸರಿನಲ್ಲಿ ನಡೆದಿರುವ ಹಗರಣಗಳ ತನಿಖೆಗೆ ಪಕ್ಷ ಆಗ್ರಹಿಸಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ.

Vijaya Karnataka Web 23 Oct 2020, 9:18 am
ಬೆಂಗಳೂರು: ಕೊರೊನಾ ನೆಪದಲ್ಲಿ ಸುಮಾರು 10 ಸಾವಿರ ಕೋಟಿಗಳಷ್ಟು ಬೃಹತ್ ಹಗರಣವನ್ನು ರಾಜ್ಯ ಬಿಜೆಪಿ ಸರ್ಕಾರ ನಡೆಸಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
Vijaya Karnataka Web coronavirus
Representative image.


ಹೋಮ್ ಐಸೋಲೇಷನ್ ಇರುವವರಿಗೆ ಕಿಟ್ ನೀಡಲಾಗುವುದು ಎಂದು ಹೇಳಿ ಯಾವುದೇ ಕಿಟ್ ನೀಡಿಲ್ಲ ಆದರೆ ಕಿಟ್ ನೀಡಲಾಗಿದೆ ಎಂದು ಸುಮಾರು ₹150 ಕೋಟಿ ಹಣ ದೋಚಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆರೋಪಿಸಿದ್ದಾರೆ.

ಕಾಲ್ ಸೆಂಟರ್‌ಗಳ ಮೂಲಕ ಸೋಂಕಿತರಿಗೆ ಕರೆ ಮಾಡಲು ಸರ್ಕಾರವೇ ತಿಳಿಸಿರುವಂತೆ 69ರೂಪಾಯಿ ನೀಡಲಾಗುತ್ತಿದೆ. ಅಂದಾಜು ಲೆಕ್ಕ ಹಾಕಿದರೂ 8 ಲಕ್ಷ ಜನರಿಗೆ 5 ಬಾರಿ ಕರೆ ಮಾಡಲು ನೂರಾರು ಕೋಟಿ ವ್ಯಯಿಸಲಾಗಿದೆ. ಹೆಚ್ಚುವರಿಯಾಗಿ 50 ರೂ ನೀಡಿ ಹಣ ದೋಚಲಾಗಿದೆ ಎಂದು ಆರೋಪ ಮಾಡಿದ್ದಾರೆ.

ಎದುರಾಳಿ ನಮ್ಮ ಸರಿಸಮನಾಗಿದ್ದರೆ ಯುದ್ಧ ಮಾಡಬಹುದು ಎಂದ ಡಿ.ಕೆ ಶಿವಕುಮಾರ್

ದೀಪಾವಳಿ ಮತ್ತು ದಸರಾ ಹಬ್ಬಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಂಪರ್ ಕೊಡುಗೆ ನೀಡುತ್ತಿದ್ದು ಕೋವಿಡ್‌ ಪ್ರಕರಣದಲ್ಲಿ ರಾಜ್ಯವನ್ನು 3 ನೇ ಸ್ಥಾನದಿಂದ 2 ನೇ ಸ್ಥಾನಕ್ಕೆ ಕೊಂಡೊಯ್ಯಲಿದ್ದಾರೆ ಎಂದು ಆಮ್‌ ಆದ್ಮಿ ಪಕ್ಷ ವ್ಯಂಗ್ಯವಾಡಿದೆ.

ದೆಹಲಿ ಮಾದರಿಯನ್ನು ಅನುಸರಿಸಿ ಎಂದು ಸ್ವತಃ ಪ್ರಧಾನಿಗಳೇ ಹೇಳಿದ್ದರೂ ನಮ್ಮ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿತು. ವೈಯಕ್ತಿಕವಾಗಿ ನಾನೇ ನಮ್ಮ ರಾಜ್ಯದ ಆರೋಗ್ಯ ಮಂತ್ರಿಗಳಿಗೆ ಕರೆ ಮಾಡಿ, ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿದರು ಸ್ಪಂದಿಸಲಿಲ್ಲ ಪಕ್ಷ ಆರೋಪಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ