ಆ್ಯಪ್ನಗರ

ಕರ್ನಾಟಕದ ಸರ್ಕಾರಿ ಶಾಲೆಗಳನ್ನು ದೆಹಲಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಿ, ಆಮ್ ಆದ್ಮಿ ಪಕ್ಷ ಒತ್ತಾಯ

ಕೊರೊನಾ ಸಂಕಷ್ಟದ ಕಾಲದಲ್ಲಿಯೂ ಈ ಬಾರಿಯ ಶೈಕ್ಷಣಿಕ ವರ್ಷದ ದೆಹಲಿ ಸರ್ಕಾರಿ ಶಾಲೆಯ ಮಕ್ಕಳ ಫಲಿತಾಂಶ ದೇಶಕ್ಕೆ ಮಾದರಿ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಸರ್ಕಾರಿ ಶಾಲೆಯನ್ನು ದೆಹಲಿ ಮಾದರಿಯಲ್ಲಿ ಅಭಿವೃದ್ದಿ ಪಡಿಸಿ ಎಂದು ಆಮ್‌ ಆದ್ಮಿ ಪಕ್ಷ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

Vijaya Karnataka Web 14 Jul 2020, 2:30 pm
ಬೆಂಗಳೂರು: ಕೊರೊನಾ ಸಂಕಷ್ಟದ ಕಾಲದಲ್ಲೂ ಈ ಬಾರಿಯ ಶೈಕ್ಷಣಿಕ ವರ್ಷದ ದೆಹಲಿ ಸರ್ಕಾರಿ ಶಾಲೆಯ ಮಕ್ಕಳ ಫಲಿತಾಂಶ ಇಡೀ ದೇಶಕ್ಕೆ ಮಾದರಿ ಆಗಿದೆ, ಶೇ 98 ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಕಳೆದ ಮೂರು ವರ್ಷಗಳ ಉತ್ತಮ ದಾಖಲೆಯನ್ನೇ ಮುರಿದಿದ್ದಾರೆ.ಈ ನಿಟ್ಟಿನಲ್ಲಿ ಕರ್ನಾಟಕದ ಸರ್ಕಾರ ಶಾಲೆಗಳನ್ನು ದೆಹಲಿ ಮಾದರಿಯಲ್ಲಿ ಅಭಿವೃದ್ದಿ ಪಡಿಸಿ ಎಂದು ಆಮ್‌ ಆದ್ಮಿ ಪಕ್ಷ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.
Vijaya Karnataka Web delhi


ದೆಹಲಿ ಸರ್ಕಾರದ ಉತ್ತಮ ಶಿಕ್ಷಣ ವ್ಯವಸ್ಥೆ ಬೇರೆ ರಾಜ್ಯಗಳಿಗೆ ಮಾದರಿ ಆಗಬೇಕಿರುವುದು ಇಂದಿನ ತುರ್ತು. ಏಕೆಂದರೆ ಸರ್ಕಾರಿ ಶಾಲೆಗಳಿಗಿಂತ ಉತ್ತಮವಾದ, ಗುಣಮಟ್ಟದ ಶಿಕ್ಷಣ ಕೊಡುತ್ತೇವೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಸುಲಿಗೆ ಮಾಡುತ್ತಿರುವ ಈ ಹೊತ್ತಿನಲ್ಲಿ ದೆಹಲಿ ಸರ್ಕಾರಿ ಶಾಲಾ ವ್ಯವಸ್ಥೆ ಹಾಗೂ ಶಿಕ್ಷಣ ದೇಶದ ಎಲ್ಲಾ ಮಕ್ಕಳಿಗೂ ಸಿಗುವಂತಾಗಲಿ ಎಂಬುದು ಆಮ್ ಆದ್ಮಿ ಪಕ್ಷದ ಕಾಳಜಿಯಾಗಿದೆ ಎಂದು ಪತ್ರಿಕಾ ಹೇಳಿಕೆಯ ಮೂಲಕ ಸರ್ಕಾರಕ್ಕೆ ಆಗ್ರಹಿಸಿದೆ.

ಪಿಯುಸಿ ಫಲಿತಾಂಶ: ಕಲಾ ವಿಭಾಗದಲ್ಲಿ ಬಳ್ಳಾರಿ ವಿದ್ಯಾರ್ಥಿಗಳು ರಾಜ್ಯಕ್ಕೆ ಫಸ್ಟ್‌!

ಕರ್ನಾಟಕದಲ್ಲಿಯೂ ಸಹ ಇದೇ ರೀತಿ ಸರ್ಕಾರಿ ಶಾಲೆಯ ಮಕ್ಕಳು ಸಾಧನೆ ಮಾಡಬೇಕು ಹಾಗೂ ದೆಹಲಿ ಮಾದರಿಯ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಬೇಕು ಎಂಬುದು ನಮ್ಮ ಮನವಿ ಮಾಡಿದೆ. ಕೊರೋನಾ ಸಂಕಷ್ಟದಿಂದ ಅನೇಕ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದ ಕುಟುಂಬಗಳು ಈ ಬಾರಿ ಮಕ್ಕಳನ್ನು ದುಬಾರಿ ಶುಲ್ಕ ಕೊಟ್ಟು ಶಾಲೆಗೆ ಕಳುಹಿಸಬೇಕೆ ಎನ್ನುವ ಗೊಂದಲದಲ್ಲಿ ಇದ್ದಾರೆ, ಇಂತಹ ಸಂಕಷ್ಟದ ಹೊತ್ತಿನಲ್ಲಿ ದೆಹಲಿ ಮಾದರಿಯಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿ ಪೋಷಕರ ನೆರವಿಗೆ ನಿಲ್ಲಬೇಕು.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: 11 ರಿಂದ 15ನೇ ಸ್ಥಾನಕ್ಕೆ ಕುಸಿದ ಮೈಸೂರು ಜಿಲ್ಲೆ

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಮೂಲ ಸೌಕರ್ಯಗಳನ್ನು ಕಲ್ಪಿಸಲು ಈ ಲಾಕ್‌ಡೌನ್ ಸಂದರ್ಭ ಚೆನ್ನಾಗಿದೆ ಎಂದು ಈ ಹಿಂದೆ ಆಮ್ ಆದ್ಮಿ ಪಕ್ಷ ಸಲಹೆ ನೀಡಿತ್ತು. ಈ ಕೂಡಲೇ ಸರ್ಕಾರ ಈ ಮನವಿಯನ್ನು ಪರಿಗಣಿಸಿ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಈ ಕೂಡಲೇ ಕೆಲಸ ಮಾಡಬೇಕು. ಬಜೆಟ್‌ನಲ್ಲಿ ಮೀಸಲಿಟ್ಟಿರುವ ಕೇವಲ ಶೇ 3 ಹಣವನ್ನು ಕನಿಷ್ಟ ಶೇ 15 ಕ್ಕೆ ಹೆಚ್ಚಿಸಬೇಕು.ಈ ಮೂಲಕವಾದರೂ ಸರ್ಕಾರ ಜನರ ನೆರವಿಗೆ ನಿಲ್ಲಲಿ ಎಂಬುದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ