ಆ್ಯಪ್ನಗರ

‘ದರಿದ್ರ ಸರಕಾರ’ ಹೇಳಿಕೆಗೆ ಬದ್ಧ; ಆಪ್‌ ಗೆಲುವು ಬದಲಾವಣೆಯ ಸೂಚನೆ ಎಂದ ಸಿದ್ದರಾಮಯ್ಯ

''ಖಜಾನೆ ಬರಿದಾಗಿದ್ದು, ಸಂಪನ್ಮೂಲ ಹೊಂದಿಸಲು ವಿಫಲವಾಗಿರುವ ಇದೊಂದು ದರಿದ್ರ ಸರಕಾರ ಎಂಬ ನನ್ನ ಹೇಳಿಕೆಗೆ ಬದ್ಧವಾಗಿದ್ದೇನೆ. ಅಧಿವೇಶನದಲ್ಲಿ ಇದಕ್ಕೆ ಸಿಎಂ ಉತ್ತರ ಕೊಡಲಿ. ಚರ್ಚೆಗೆ ನಾನು ಸಿದ್ಧನಿದ್ದೇನೆ,'' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Vijaya Karnataka 11 Feb 2020, 8:59 pm

ಬೆಂಗಳೂರು: ಸಿಎಂ ಬಿಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ 'ದರಿದ್ರ ಸರಕಾರ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ''ಖಜಾನೆ ಬರಿದಾಗಿದ್ದು, ಸಂಪನ್ಮೂಲ ಹೊಂದಿಸಲು ವಿಫಲವಾಗಿರುವ ಇದೊಂದು ದರಿದ್ರ ಸರಕಾರ ಎಂಬ ನನ್ನ ಹೇಳಿಕೆಗೆ ಬದ್ಧವಾಗಿದ್ದೇನೆ. ಅಧಿವೇಶನದಲ್ಲಿ ಇದಕ್ಕೆ ಸಿಎಂ ಉತ್ತರ ಕೊಡಲಿ. ಚರ್ಚೆಗೆ ನಾನು ಸಿದ್ಧನಿದ್ದೇನೆ,'' ಎಂದು ಅವರು ಹೇಳಿದ್ದಾರೆ.
Vijaya Karnataka Web Siddaramaiah


ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ,''ಫೆ. 17 ರಿಂದ ಅಧಿವೇಶನ ನಡೆಯಬೇಕು. ಯಡಿಯೂರಪ್ಪ ಅವರು ಸದನ ನಡೆಸುತ್ತಾರೋ ಅಥವಾ ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಸಲಾಗದೆ ಹೆದರಿ ಪಲಾಯನವಾದ ಮಾಡಿದಂತೆ ನಡೆದುಕೊಳ್ಳುತ್ತಾರೋ ಕಾದು ನೋಡೋಣ,'' ಎಂದು ಹೇಳಿದರು.

''ಬಿಜೆಪಿ ಬಗ್ಗೆ ದೇಶದ ಜನ ಭ್ರಮನಿರಸನಗೊಂಡಿದ್ದು, ಬಿಜೆಪಿ ಮುಕ್ತ ಮಾಡಲು ಹೊರಟಿದ್ದಾರೆ. ಹಿಂದುತ್ವದ ಅಜೆಂಡಾ ವರ್ಕ್ ಔಟ್‌ ಆಗುತ್ತಿಲ್ಲ. ಲೋಕಸಭೆ ಚುನಾವಣೆ ಬಳಿಕ ದೇಶದ ಎಲ್ಲಾ ಭಾಗಗಳಲ್ಲಿ ಬಿಜೆಪಿ ಚುನಾವಣೆ ಸೋಲುತ್ತಿದೆ. ದಿಲ್ಲಿ ಜನತೆ ಬಿಜೆಪಿ ಮೇಲಿನ ಕೋಪಕ್ಕೆ ಕೇಜ್ರಿವಾಲ್‌ಗೆ ಆಶೀರ್ವಾದ ಮಾಡಿದ್ದಾರೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿಗೆ ಹಿನ್ನಡೆಯಾಗಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚು ಸ್ಥಾನಗಳು ಸಿಕ್ಕಿವೆ. ಇದು ಬದಲಾವಣೆಯ ಸೂಚನೆ,'' ಎಂದು ಸಿದ್ದರಾಮಯ್ಯ ವಿಶ್ಲೇಷಿಸಿದರು.

ಕಾಂಗ್ರೆಸ್‌ಗೆ ಲೋಕಲ್‌ ಜಯ, ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ-ಜೆಡಿಎಸ್‌ ಹಿಂದಿಕ್ಕಿದ 'ಕೈ'


ಎಚ್ಚರಿಕೆ ಗಂಟೆ

''ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಿರುವುದು ನಿಜವಾದರೂ, ಬಿಜೆಪಿ ಸರ್ವಾಧಿಕಾರಿ ಧೋರಣೆಗೆ ದೊಡ್ಡ ಪೆಟ್ಟು ಬಿದ್ದಿದೆ. ಫಲಿತಾಂಶವು ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆಯಾಗಿದ್ದು, ತಳಮಟ್ಟದಿಂದ ಪಕ್ಷ ಸಂಘಟಿಸಿ ಚೈತನ್ಯ ತುಂಬುವ ಕೆಲಸ ಆಗಬೇಕು,'' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

''ರಾಜ್ಯದಲ್ಲಿ ಪಕ್ಷದ ನಾಯಕರು ಸ್ವಪ್ರತಿಷ್ಠೆ ತೊರೆದು, ಒಟ್ಟಾಗಿ ಸಂಘಟನೆ ಕೆಲಸದಲ್ಲಿ ತೊಡಗಬೇಕು. ಒಗ್ಗಟ್ಟಾಗಿ ಪಕ್ಷ ಸಂಘಟನೆ ಕೆಲಸ ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಉತ್ತಮ ಭವಿಷ್ಯವಿದೆ'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ