ಅಕಾಡೆಮಿಗಳ ಅಧ್ಯಕ್ಷರ ನೇಮಕ ರದ್ದು: ಸರಕಾರಕ್ಕೆ ತುರ್ತು ನೋಟಿಸ್
ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ , ಕೊಡವ ಸಾಹಿತ್ಯ ಅಕಾಡೆಮಿ ಸೇರಿದಂತೆ ಎಲ್ಲ ಅಕಾಡೆಮಿಗಳ ಅಧ್ಯಕ್ಷ ಸ್ಥಾನಕ್ಕೆ ಮಾಡಿದ್ದ ನೇಮಕ ...
Vijaya Karnataka 10 Sep 2019, 5:00 am
ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ , ಕೊಡವ ಸಾಹಿತ್ಯ ಅಕಾಡೆಮಿ ಸೇರಿದಂತೆ ಎಲ್ಲ ಅಕಾಡೆಮಿಗಳ ಅಧ್ಯಕ್ಷ ಸ್ಥಾನಕ್ಕೆ ಮಾಡಿದ್ದ ನೇಮಕ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ತುರ್ತು ನೋಟಿಸ್ ಜಾರಿಗೊಳಿಸಿದೆ.
ನಾಟಕ ಅಕಾಡೆಮಿ ಅಧ್ಯಕ್ಷ ರಾಗಿದ್ದ ಜೆ.ಲೋಕೇಶ್ ಮತ್ತು ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಾಗಿದ್ದ ಪೆಮ್ಮಂಡ ಕೆ.ಪೊನ್ನಪ್ಪ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತು.
ಕೆಲ ಕಾಲ ವಾದ ಆಲಿಸಿದ ಬಳಿಕ ನ್ಯಾಯಪೀಠ, ಪ್ರತಿವಾದಿಗಳಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹಾಗೂ ನಿರ್ದೇಶಕರು ಮತ್ತು ನಾಟಕ ಅಕಾಡೆಮಿ ರಿಜಿಸ್ಟ್ರಾರ್ಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿತು.
ಅಲ್ಲದೆ, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಸೆ.26ಕ್ಕೆ ಮುಂದೂಡಲಾಗಿದೆ.
ಅರ್ಜಿದಾರರ ಪರ ವಕೀಲರು, ''ಅಕಾಡೆಮಿಗಳ ಅಧ್ಯಕ್ಷರ ನೇಮಕ ರದ್ದುಗೊಳಿಸಿ 2019ರ ಜು.31ರಂದು ಹೊರಡಿಸಿರುವ ಸರಕಾರದ ಆದೇಶ ನೇಮಕ ನಿಯಮಗಳಿಗೆ ವಿರುದ್ಧವಾಗಿದೆ. ನೇಮಕ ಆದೇಶವನ್ನು ಹಿಂದಿನ ಸರಕಾರ 3 ವರ್ಷಗಳ ಅವಧಿಗೆ ನೀಡಿತ್ತು. ನಿಯಮದ ಪ್ರಕಾರವೂ ಅಧ್ಯಕ್ಷರ ಅವಧಿ ಮೂರು ವರ್ಷವೆಂದು ನಿಗದಿಪಡಿಸಲಾಗಿದೆ. ಆದರೆ ಸರಕಾರ ಬದಲಾಗುತ್ತಿದ್ದಂತೆಯೇ ಎಲ್ಲ ಅಕಾಡೆಮಿಗಳ ಅಧ್ಯಕ್ಷರ ನೇಮಕವನ್ನು ರದ್ದುಗೊಳಿಸಲಾಗಿದೆ,'' ಎಂದು ನ್ಯಾಯಪೀಠಕ್ಕೆ ವಿವರಿಸಿದರು.
2005ರ ಅಕಾಡೆಮಿಗಳ ಬೈಲಾದಲ್ಲೂ ಅಧ್ಯಕ್ಷರ ಅವಧಿ ಮೂರು ವರ್ಷ ಎಂದು ನಿಗದಿಪಡಿಸಲಾಗಿದೆ. 2017ರ ಸಾಂಸ್ಕೃತಿಕ ನೀತಿಯಲ್ಲೂ ಸಹ ಅಧ್ಯಕ್ಷರ ಅವಧಿ ಮೂರು ವರ್ಷ ಎಂದು ಉಲ್ಲೇಖಿಸಲಾಗಿದೆ. ಸರಕಾರ ಈ ಎಲ್ಲ ನಿಯಮಗಳನ್ನು ಗಾಳಿಗೆ ತೂರಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಜೊತೆಗೆ ಸರಕಾರ ತನ್ನಿಷ್ಟಕ್ಕೆ ತಕ್ಕಂತೆ ನೇಮಕಾತಿ ರದ್ದುಗೊಳಿಸಿರುವುದು ಏಕಪಕ್ಷೀಯವಾಗಿದೆ. ಅಕಾಡೆಮಿಗಳ ಅಧ್ಯಕ್ಷರ ನೇಮಕ ದಿಢೀರ್ ರದ್ದುಗೊಳಿಸಿರುವುದರಿಂದ ಅಧ್ಯಕ್ಷರಾಗಿದ್ದವರು ರೂಪಿಸಿದ್ದ ಯೋಜನೆಗಳು ಅರ್ಧಕ್ಕೆ ನಿಂತುಹೋಗುತ್ತವೆ, ಅದಕ್ಕೆ ಖರ್ಚಾಗಿರುವ ಹಣವೂ ವ್ಯರ್ಥವಾಗುತ್ತದೆ ಎಂದೂ ಅರ್ಜಿದಾರರು ಆಕ್ಷೇಪಿಸಿದ್ದಾರೆ.
ನಾಟಕ ಅಕಾಡೆಮಿ ಅಧ್ಯಕ್ಷ ರಾಗಿದ್ದ ಜೆ.ಲೋಕೇಶ್ ಮತ್ತು ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಾಗಿದ್ದ ಪೆಮ್ಮಂಡ ಕೆ.ಪೊನ್ನಪ್ಪ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತು.
ಕೆಲ ಕಾಲ ವಾದ ಆಲಿಸಿದ ಬಳಿಕ ನ್ಯಾಯಪೀಠ, ಪ್ರತಿವಾದಿಗಳಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹಾಗೂ ನಿರ್ದೇಶಕರು ಮತ್ತು ನಾಟಕ ಅಕಾಡೆಮಿ ರಿಜಿಸ್ಟ್ರಾರ್ಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿತು.
ಅಲ್ಲದೆ, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಸೆ.26ಕ್ಕೆ ಮುಂದೂಡಲಾಗಿದೆ.
ಅರ್ಜಿದಾರರ ಪರ ವಕೀಲರು, ''ಅಕಾಡೆಮಿಗಳ ಅಧ್ಯಕ್ಷರ ನೇಮಕ ರದ್ದುಗೊಳಿಸಿ 2019ರ ಜು.31ರಂದು ಹೊರಡಿಸಿರುವ ಸರಕಾರದ ಆದೇಶ ನೇಮಕ ನಿಯಮಗಳಿಗೆ ವಿರುದ್ಧವಾಗಿದೆ. ನೇಮಕ ಆದೇಶವನ್ನು ಹಿಂದಿನ ಸರಕಾರ 3 ವರ್ಷಗಳ ಅವಧಿಗೆ ನೀಡಿತ್ತು. ನಿಯಮದ ಪ್ರಕಾರವೂ ಅಧ್ಯಕ್ಷರ ಅವಧಿ ಮೂರು ವರ್ಷವೆಂದು ನಿಗದಿಪಡಿಸಲಾಗಿದೆ. ಆದರೆ ಸರಕಾರ ಬದಲಾಗುತ್ತಿದ್ದಂತೆಯೇ ಎಲ್ಲ ಅಕಾಡೆಮಿಗಳ ಅಧ್ಯಕ್ಷರ ನೇಮಕವನ್ನು ರದ್ದುಗೊಳಿಸಲಾಗಿದೆ,'' ಎಂದು ನ್ಯಾಯಪೀಠಕ್ಕೆ ವಿವರಿಸಿದರು.
2005ರ ಅಕಾಡೆಮಿಗಳ ಬೈಲಾದಲ್ಲೂ ಅಧ್ಯಕ್ಷರ ಅವಧಿ ಮೂರು ವರ್ಷ ಎಂದು ನಿಗದಿಪಡಿಸಲಾಗಿದೆ. 2017ರ ಸಾಂಸ್ಕೃತಿಕ ನೀತಿಯಲ್ಲೂ ಸಹ ಅಧ್ಯಕ್ಷರ ಅವಧಿ ಮೂರು ವರ್ಷ ಎಂದು ಉಲ್ಲೇಖಿಸಲಾಗಿದೆ. ಸರಕಾರ ಈ ಎಲ್ಲ ನಿಯಮಗಳನ್ನು ಗಾಳಿಗೆ ತೂರಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಜೊತೆಗೆ ಸರಕಾರ ತನ್ನಿಷ್ಟಕ್ಕೆ ತಕ್ಕಂತೆ ನೇಮಕಾತಿ ರದ್ದುಗೊಳಿಸಿರುವುದು ಏಕಪಕ್ಷೀಯವಾಗಿದೆ. ಅಕಾಡೆಮಿಗಳ ಅಧ್ಯಕ್ಷರ ನೇಮಕ ದಿಢೀರ್ ರದ್ದುಗೊಳಿಸಿರುವುದರಿಂದ ಅಧ್ಯಕ್ಷರಾಗಿದ್ದವರು ರೂಪಿಸಿದ್ದ ಯೋಜನೆಗಳು ಅರ್ಧಕ್ಕೆ ನಿಂತುಹೋಗುತ್ತವೆ, ಅದಕ್ಕೆ ಖರ್ಚಾಗಿರುವ ಹಣವೂ ವ್ಯರ್ಥವಾಗುತ್ತದೆ ಎಂದೂ ಅರ್ಜಿದಾರರು ಆಕ್ಷೇಪಿಸಿದ್ದಾರೆ.