ಎಸಿಬಿ ವಿಶೇಷ ವಕೀಲ ಸ್ಥಾನಕ್ಕೆ ರಾಜೀನಾಮೆ
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಸಂಬಂಧ ಸರಕಾರಿ ಆದೇಶ ರದ್ದತಿ ಪ್ರಶ್ನಿಸಿ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ಕುರಿತು ಸರಕಾರದ ಪರ ವಾದ ಮಂಡಿಸಲು ವಿಶೇಷ ವಕೀಲರಾಗಿ ನೇಮಕವಾಗಿದ್ದ ಎ.ಎಸ್.ಪೊನ್ನಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.
Vijaya Karnataka 1 Aug 2019, 5:00 am
ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಸಂಬಂಧ ಸರಕಾರಿ ಆದೇಶ ರದ್ದತಿ ಪ್ರಶ್ನಿಸಿ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ಕುರಿತು ಸರಕಾರದ ಪರ ವಾದ ಮಂಡಿಸಲು ವಿಶೇಷ ವಕೀಲರಾಗಿ ನೇಮಕವಾಗಿದ್ದ ಎ.ಎಸ್.ಪೊನ್ನಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.
ಸಮ್ಮಿಶ್ರ ಸರಕಾರದ ವೇಳೆ ವಿಶೇಷ ವಕೀಲರಾಗಿ ನೇಮಕವಾಗಿದ್ದ ಅವರು ಸರಕಾರ ಬದಲಾದ ಕಾರಣ ರಾಜೀನಾಮೆ ನೀಡಿದ್ದಾರೆ. ಹಿಂದಿನ ಸರಕಾರದ ಅವಧಿಯಲ್ಲಿ ಎಸಿಬಿ ರಚಿಸಿದ್ದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಪ್ರಕರಣಗಳ ಕುರಿತು ಸರಕಾರದ ಪರ ವಾದ ಮಂಡಿಸಲು ಹಿರಿಯ ವಕೀಲರನ್ನು ನೇಮಿಸಬೇಕಿದ್ದ ಕಾರಣ ಹಿಂದಿನ ಸರಕಾರದ ಅವಧಿಯಲ್ಲಿ ಪೊನ್ನಣ್ಣರನ್ನು ವಿಶೇಷ ವಕೀಲರನ್ನಾಗಿ ನಿಯೋಜಿಸಲಾಗಿತ್ತು.
ಸಮ್ಮಿಶ್ರ ಸರಕಾರದ ವೇಳೆ ವಿಶೇಷ ವಕೀಲರಾಗಿ ನೇಮಕವಾಗಿದ್ದ ಅವರು ಸರಕಾರ ಬದಲಾದ ಕಾರಣ ರಾಜೀನಾಮೆ ನೀಡಿದ್ದಾರೆ. ಹಿಂದಿನ ಸರಕಾರದ ಅವಧಿಯಲ್ಲಿ ಎಸಿಬಿ ರಚಿಸಿದ್ದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಪ್ರಕರಣಗಳ ಕುರಿತು ಸರಕಾರದ ಪರ ವಾದ ಮಂಡಿಸಲು ಹಿರಿಯ ವಕೀಲರನ್ನು ನೇಮಿಸಬೇಕಿದ್ದ ಕಾರಣ ಹಿಂದಿನ ಸರಕಾರದ ಅವಧಿಯಲ್ಲಿ ಪೊನ್ನಣ್ಣರನ್ನು ವಿಶೇಷ ವಕೀಲರನ್ನಾಗಿ ನಿಯೋಜಿಸಲಾಗಿತ್ತು.