ಆ್ಯಪ್ನಗರ

ರಾಜ್ಯಾದ್ಯಂತ ಮೂವರು ಭ್ರಷ್ಟಾಚಾರ ಆರೋಪಿತ ಅಧಿಕಾರಗಳ ನಿವಾಸದ ಮೇಲೆ ಎಸಿಬಿ ದಾಳಿ

ಇಂದು (ಗುರುವಾರ) ಎಸಿಬಿ ಅಧಿಕಾರಿಗಳು ರಾಜ್ಯಾದ್ಯಂತ ಮೂವರು ಸರಕಾರಿ ಅಧಿಕಾರಗಳ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

Vijaya Karnataka Web 3 Oct 2019, 12:42 pm
ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣದಲ್ಲಿ ಮೂವರು ಸರಕಾರಿ ಅಧಿಕಾರಿಗಳ 16 ಸ್ಥಳಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ (ಎಸಿಬಿ) ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.
Vijaya Karnataka Web acb


ಅಮಾನತುಗೊಂಡಿರುವ ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್ ಮೂರ್ತಿ, ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ಪಂಚಾಯತ್ ರಾಜ್ ಕಾರ್ಯನಿರ್ವಾಹಕ ಎಂಜಿನಿಯರ್ ಕೆ ಹನುಮಂತಪ್ಪ ಮತ್ತು ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಪಂಚಾಯತ್ ರಾಜ್ ಕಿರಿಯ ಎಂಜಿನಿಯರ್ ವಿಜಯ್ ರೆಡ್ಡಿ ಅವರಿಗೆ ಸೇರಿದ ಸ್ಥಳಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.

ಪ್ರಸ್ತುತ ಅಮಾನತ್ತಿನಲ್ಲಿರುವ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್‌ ಮೂರ್ತಿ ಅವರ ಸದಾಶಿವ ನಗರದ ಮನೆ, ಜಾಲಹಳ್ಳಿ ಕ್ರಾಸ್ ರಸ್ತೆಯ ಎಚ್‌ಎಂಟಿ ಕಾಲೋನಿಯಲ್ಲಿನ ಮನೆ, ಆರ್‌ ಟಿ ನಗರದಲ್ಲಿನ ಓಂ ಶಕ್ತಿ ಅಪಾರ್ಟ್‌ಮೆಂಟ್‌ನಲ್ಲಿರುವ 2 ಫ್ಲ್ಯಾಟ್ ಸೇರಿದಂತೆ ಕೊಡಗು ಜಿಲ್ಲೆಯ ಕೆ.ನಿಡುಗಣಿ ಗ್ರಾಮದ ಕಾಫಿ ತೋಟದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಳ್ಳಂಬೆಳಗ್ಗೆ ಪಂಚಾಯತ್ ರಾಜ್ ಇಲಾಖೆಯ ಹುಮನಾಬಾದ್ ವಿಭಾಗದ ಜೆಇ ಆಗಿರುವ ವಿಜಯ್ ರೆಡ್ಡಿ ಅವರ ನಿವಾಸ ಹಾಗೂ ನಿರ್ಣಾ ಗ್ರಾಮದ ಫಾರಂ ಹೌಸ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಎಸಿಬಿ ಎಸ್‌ಪಿ ವಿ.ಎಂ.ಜ್ಯೋತಿ ಅವರ ಮಾರ್ಗದರ್ಶನದಲ್ಲಿ ಬೀದರ್ ಡಿಎಸ್‌ಪಿ ಬಿ ಬಿ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಪಂಚಾಯತ್ ರಾಜ್ ಇಂಜನಿಯರಿಂಗ್ ಉಪ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರ ಕೆ ಹನುಮಂತಪ್ಪ ಅವರ ಹೊಸಪೇಟೆ ನಗರದ ನಿವಾಸ, ಹೂವಿನ ಹಡಗಲಿ ಪಂಚಾಯತ್ ರಾಜ್ ಇಂಜನಿಯರಿಂಗ್ ಉಪ ವಿಭಾಗ ಕಚೇರಿ, ಕೆಕೆಆರ್‌ಎಚ್ ಸ್ಕೂಲ್, ನಾಗತಿ ಬಸಾಪುರದ ಸುಮಶ್ರೀ ಪತ್ತಿನ ಸೌಹಾರ್ದ ಕೋ-ಆಪರೇಟೀವ್ ಬ್ಯಾಂಕ್ ಮೇಲೆ ಅಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ