ಆ್ಯಪ್ನಗರ

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ ಮೇಲೆ ಎಸಿಬಿ ದಾಳಿ

ಆದಾಯಕ್ಕೆ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ರಾಜ್ಯದ ಮೂವರು ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Vijaya Karnataka Web 17 Jul 2018, 12:59 pm
ಬೆಂಗಳೂರು: ಆದಾಯಕ್ಕೆ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ರಾಜ್ಯದ ಮೂವರು ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Vijaya Karnataka Web acb3


ಬೆಂಗಳೂರಿನ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ವಿಜಯ್ ಕುಮಾರ್, ಉಪ ನಿರ್ದೇಶಕ ಗಂಗಯ್ಯ ಮತ್ತು ಚಿಕ್ಕಮಗಳೂರು ಅರಣ್ಯ ಇಲಾಖೆ ಎಸಿಎಫ್ ಕೆ.ಎನ್.ರಂಗಸ್ವಾಮಿ ಅವರು ಕಚೇರಿ ಹಾಗೂ ನಿವಾಸದ ಸೇರಿದಂತೆ ಒಟ್ಟು ಎಂಟು ಕಡೆ ದಾಳಿ ನಡೆದಿದೆ.

ಎಸಿಬಿ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಭ್ರಷ್ಟಾಚಾರ ಆರೋಪಿತ ಅಧಿಕಾರಿಗಳು ಹೊಂದಿರುವ ಆಸ್ತಿ-ಪಾಸ್ತಿಗಳು ಮೂಲದ ಬಗ್ಗೆ ತನಿಖೆ ಮುಂದುವರೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ