ಆ್ಯಪ್ನಗರ

ಆರ್.ಟಿ.ಓ ಕಚೇರಿ ಮೇಲೆ ಎಸಿಬಿ ದಿಢೀರ್ ದಾಳಿ ; 12 ಮಧ್ಯವರ್ತಿಗಳ ಬಂಧನ

ದಾಖಲೆ ತಯಾರು ಮಾಡಿ ಕೊಡುವ ನೆಪದಲ್ಲಿ ಜನರಿಂದ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಜಯನಗರ ಆರ್.ಟಿ.ಓ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿ 12 ಮಧ್ಯವರ್ತಿಗಳನ್ನು ಬಂಧಿಸಿದೆ.

Vijaya Karnataka Web 13 Sep 2019, 11:30 pm
ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿರುವ ಆರ್.ಟಿ.ಓ ಕಚೇರಿಗೆ ದಿಢೀರ್ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು 1.40 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದು ಜನರಿಂದ ಹಣ ವಸೂಲಿ ಮಾಡುತ್ತಿದ್ದ 1 2 ಮಧ್ಯವರ್ತಿಗಳನ್ನು ಬಂಧಿಸಿದ್ದಾರೆ.
Vijaya Karnataka Web acb raid


ನೂತನ ಸಂಚಾರ ನಿಯಮ ಜಾರಿಗೆ ಬಂದ ಹಿನ್ನೆಲೆಯಲ್ಲಿ ಭಾರೀ ದಂಡದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಆರ್.ಟಿ.ಓ ಕಚೇರಿಗಳಿಗೆ ದಾಖಲೆಗಳನ್ನು ಪಡೆದುಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ.

ಈ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡ ಆರ್.ಟಿ.ಓ ಕಚೇರಿಯಲ್ಲಿರುವ ಮಧ್ಯವರ್ತಿಗಳು ದಾಖಲೆ ತಯಾರು ಮಾಡಿಕೊಡುವ ಹೆಸರಿನಲ್ಲಿ ಜನರಿಂದ ಸುಲಿಗೆ ಮಾಡುತ್ತಿದ್ದರು. ಸರಕಾರಿ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ಜನರಿಂದ ಮಧ್ಯವರ್ತಿಗಳು ಪಡೆದುಕೊಳ್ಳುತ್ತಿದ್ದರು.

ಈ ಕುರಿತಾಗಿ ಮಾಹಿತಿ ಬಂದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಸ್ಪಿ ಜಿನೇಂದ್ರ ಖನಗಾವಿ ನೇತ್ರತ್ವದಲ್ಲಿ ದಾಳಿ ನಡೆಸಿ ಮಧ್ಯವರ್ತಿಗಳನ್ನು ಬಂಧಿಸಿ ಅವರಲ್ಲಿದ್ದ ಡಿ.ಎಲ್, ಸ್ಪಾರ್ಟ್ ಕಾರ್ಡ್ ಹಾಗೂ ಇನ್ನಿತರ ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ದಾಳಿಯ ಸಂದರ್ಭದಲ್ಲಿ ವಾರಸುದಾರರಿಲ್ಲದ 2.71 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ