ಆ್ಯಪ್ನಗರ

ಅತೃಪ್ತ ಶಾಸಕರ ವಿರುದ್ಧ ಪಕ್ಷಾಂತರ ಕಾಯಿದೆಯಡಿ ಕ್ರಮಕ್ಕೆ ಸಿದ್ದರಾಮಯ್ಯ ಸ್ಪೀಕರ್‌ಗೆ ಮನವಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿಪ್ ಉಲ್ಲಂಘಿಸಿ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಮಹೇಶ್ ಕುಮ್ಮಟಳ್ಳಿ, ಬಿ.ನಾಗೇಂದ್ರ, ಉಮೇಶ್ ಜಾಧವ್ ಮತ್ತು ಜೆ.ಎನ್.ಗಣೇಶ್ ಸದನಕ್ಕೆ ಗೈರಾಗಿದ್ದಾರೆ.

Vijaya Karnataka Web 8 Feb 2019, 2:01 pm
ಬೆಂಗಳೂರು: ಕಾಂಗ್ರೆಸ್ ಸಿಎಲ್‌ಪಿ ಸಭೆಗೆ ಪಕ್ಷದ ಐವರು ಶಾಸಕರು ಗೈರು ಹಾಜರಾಗಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web siddaramaiah


ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿಪ್ ಉಲ್ಲಂಘಿಸಿ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಮಹೇಶ್ ಕುಮ್ಮಟಳ್ಳಿ, ಬಿ.ನಾಗೇಂದ್ರ, ಉಮೇಶ್ ಜಾಧವ್ ಮತ್ತು ಜೆ.ಎನ್.ಗಣೇಶ್ ಸದನಕ್ಕೆ ಗೈರಾಗಿದ್ದಾರೆ.

ಎಲ್ಲ ಶಾಸಕರಿಗೂ ಸದನದಲ್ಲಿ ಪಾಲ್ಗೊಳ್ಳುವಂತೆ ವಿಪ್ ಜಾರಿ ಮಾಡಲಾಗಿತ್ತು. ಅಧಿವೇಶನ ಮುಗಿಯುವವರೆಗೂ ಬರುವುದಿಲ್ಲ ಎಂದು ನಾಲ್ವರು ಶಾಸಕರು ಪತ್ರದ ಮೂಲಕ ಉತ್ತರಿಸಿದ್ದರು. ನಿಮ್ಮ ನಿಲುವಿನ ಬಗ್ಗೆ ಸ್ಪಷ್ಟಪಡಿಸಿ ಎಂದು ಸೂಚಿಸಿದ್ದೆ. ಆದರೆ, ಅವರು ಇಲ್ಲಿಯವರೆಗೂ ನನ್ನನ್ನು ಸಂಪರ್ಕಿಸಿಯೇ ಇಲ್ಲ. ಅಧಿವೇಶನಕ್ಕೂ ಹಾಜರಾಗಿಲ್ಲ. ಹೀಗಾಗಿ ಅವರ ವಿರುದ್ಧ ಪಕ್ಷಾಂತರ ನಿಷೇಧ ಕಾಯಿದೆ ಅಡಿಯಲ್ಲಿ ಕ್ರಮ ಜರುಗಿಸುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಪರೇಷನ್ ಕಮಲದ ಆಡಿಯೋ ಕುರಿತು ಸರಕಾರ ತನಿಖೆ ನಡೆಸಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ