ಆ್ಯಪ್ನಗರ

ಎಸ್ಸೆಸ್ಸೆಲ್ಸಿ, ಪಿಯು ಪ್ರಶ್ನೆಪತ್ರಿಕೆ ಆನ್‌ಲೈನ್‌ನಲ್ಲಿ ಹಾಕಿ ಗೊಂದಲ ಸೃಷ್ಟಿಸಿದರೆ ಹುಷಾರ್‌: ಸುರೇಶ್‌ ಕುಮಾರ್ ಎಚ್ಚರಿಕೆ

ಸಾಮಾಜಿಕ ಜಾಲತಾಣಗಳ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸುವವರ ವಿರುದ್ಧ ಅಧಿಕಾರಿಗಳು ಸುತ್ತೋಲೆ ಹೊರಡಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರಶ್ನೆಪತ್ರಿಕೆ ವಿಚಾರದಲ್ಲಿ ಪ್ರಮಾದ ಸಂಭವಿಸದಂತೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು

Vijaya Karnataka Web 14 Feb 2020, 8:38 pm
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪ್ರಶ್ನೆ ಪತ್ರಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಗೊಂದಲ ಮೂಡಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web ಸುರೇಶ್‌ ಕುಮಾರ್
ಸುರೇಶ್‌ ಕುಮಾರ್


ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ಸಿದ್ಧತೆ ಕುರಿತು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಮತ್ತು ಉಪವಿಭಾಗಗಳ ಖಜಾನಾಧಿಕಾರಿಗಳು ಹಾಗೂ ಉಪನಿರ್ದೇಶಕರೊಂದಿಗೆ ಸುರೇಶ್‌ಕುಮಾರ್ ವಿಡಿಯೋ ಸಂವಾದ ನಡೆಸಿದರು.

ಸಾಮಾಜಿಕ ಜಾಲತಾಣಗಳ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸುವವರ ವಿರುದ್ಧ ಅಧಿಕಾರಿಗಳು ಸುತ್ತೋಲೆ ಹೊರಡಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರಶ್ನೆಪತ್ರಿಕೆ ವಿಚಾರದಲ್ಲಿ ಯಾವುದೇ ರೀತಿಯ ಪ್ರಮಾದ ಸಂಭವಿಸದಂತೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಸಚಿವರು ಸೂಚನೆ ನೀಡಿದರು.

ಪರೀಕ್ಷೆ ಕೇಂದ್ರಗಳಿಗೆ ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಯಾರಿಗೂ ಅವಕಾಶ ನೀಡಬಾರದು. ದಿವ್ಯಾಂಗರಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಹಾಯಕರನ್ನು ನೀಡುವ ಕುರಿತು ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲಾಗಿದೆ ಎಂದರು.

ಮಕ್ಕಳ ನೈತಿಕತೆ ಕುಗ್ಗಿಸುವ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳಗಳಲಾಗುವುದು ಎಂದು ಸಚಿವ ಸುರೇಶ್‌ ಕುಮಾರ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ