ಆ್ಯಪ್ನಗರ

ಹೋರಾಟ ಮಾಡುವವರು ಕಾನೂನು ಪಾಲಿಸಬೇಕು: ಡಿಸಿಎಂ

ಶಾಸಕ ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಹೋರಾಟ ಮಾಡುವವರು ಕಾನೂನು ಪಾಲಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

Vijaya Karnataka 11 Sep 2019, 5:00 am
ಬೆಂಗಳೂರು : ಶಾಸಕ ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಹೋರಾಟ ಮಾಡುವವರು ಕಾನೂನು ಪಾಲಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.
Vijaya Karnataka Web activists should fallow the rule dcm
ಹೋರಾಟ ಮಾಡುವವರು ಕಾನೂನು ಪಾಲಿಸಬೇಕು: ಡಿಸಿಎಂ


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ನಾವೆಲ್ಲರೂ ಸಂವಿಧಾನಕ್ಕೆ ಬದ್ಧರಾಗಿರಬೇಕು. ಕಾನೂನು ಪಾಲಿಸಬೇಕು. ಸಂವಿಧಾನದ ಚೌಕಟ್ಟಿನಲ್ಲಿ ಎಲ್ಲರೂ ಬದುಕು ನಡೆಸಬೇಕು. ಪ್ರತಿಭಟನಾಕಾರರು ಕಾಳಜಿ, ಭಾವನೆ ವ್ಯಕ್ತಪಡಿಸಬೇಕು. ಆದರೆ ಕಾನೂನು ಕೈಗೆ ತೆಗೆದುಕೊಳ್ಳುವಂತಾಗಬಾರದು. ಈ ಸಮಸ್ಯೆಯನ್ನು ಎದುರಿಸುತ್ತೇನೆ ಎಂದು ಶಿವಕುಮಾರ್‌ ಅವರೇ ಹೇಳಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಪ್ರತಿ ನಾಗರಿಕ ಗೌರವಿಸಬೇಕು. ಭ್ರಷ್ಟಾಚಾರದ ವಿರುದ್ಧ ನಾವು ಹೋರಾಟ ನಡೆಸಬೇಕೇ ಹೊರತು ಯಾರ ಪರವಾಗಿಯೂ ಅಲ್ಲ,'' ಎಂದರು.

''ಮಾಜಿ ಸಿಎಂ ಕುಮಾರಸ್ವಾಮಿ ತುಂಬಾ ಹತಾಶರಾಗಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಾಚಾರದ ವಿರುದ್ಧ ಏನು ಮಾಡಿದ್ದಾರೆ ಎನ್ನುವುದು ಮುಖ್ಯ,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ